ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಶೀಘ್ರವೇ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ನಟ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ. ಈ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿ ಮಾತನಾಡಿದರು.
ಅಪ್ಪು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರೆಂದೂ ಅಭಿಮಾನಿಗಳು, ಆರಾಧಕರ ಹೃದಯದಲ್ಲಿ ಜೀವಂತವಾಗಿದ್ದಾರೆ. ಅವರು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ.
Advertisement. Scroll to continue reading.
ಪುನೀತ್ ರಾಜ್ ಕುಮಾರ್ ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದವರು. ನಮಗೂ ಅವರು ಪ್ರೇರಣೆಯಾದಂತವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತೇವೆ ಎಂದಿದ್ದಾರೆ.