ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನನ್ನು ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್ಐಎ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹರ್ಷ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈಗ ಹರ್ಷ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.
ಈ ಬಗ್ಗೆ ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ ಮೂಲಕ ಎನ್ಐಎ ತನಿಖೆಗೆ ವರ್ಗಾಯಿಸಲಾಗಿದೆ.
ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಸಲು ನಿನ್ನೆ ಸಂಜೆಯೇ ಶಿವಮೊಗ್ಗಕ್ಕೆ ಆಗಮಿಸಿರುವಂತ ಎನ್ಐಎ ತಂಡದ ಅಧಿಕಾರಿಗಳು, ಹರ್ಷ ಹತ್ಯೆ ಸಂಬಂಧ ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Advertisement. Scroll to continue reading.