ಕರಾವಳಿ

ಮಂಗಳೂರು : ಬಲಿದಾನ್ ದಿವಸ್ ಪ್ರಯುಕ್ತ ತಾಲೂಕು ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

0

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಮಂಗಳೂರು ಮಹಾನಗರದ ವತಿಯಿಂದ ಬಲಿದಾನ್ ಟ್ರೋಫಿ 2022 ತಾಲೂಕು ಮಟ್ಟದ ಅಂತರಕಾಲೇಜು ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಲಾಲ್ ಬಾಗಿನ ಆಫೀಸರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ಈ ಕಬಡ್ಡಿ ಪಂದ್ಯಾಟವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕಿಶೋರ್ ಕುಮಾರ್ ಅವರು ಉದ್ಘಾಟಿಸಿ ಶುಭಹಾರೈಸಿದರು.


ಮಂಗಳೂರು ತಾಲೂಕಿನಿಂದ ಒಟ್ಟು 25 ತಂಡಗಳು ಭಾಗವಹಿಸಿದ್ದವು.
ಪ್ರಥಮ ಸ್ಥಾನವನ್ನು ವಿಕಾಸ್ ಕಾಲೇಜ್ ಪಡೆಯಿತು. ದ್ವಿತೀಯ ಸ್ಥಾನವನ್ನು ಎಸ್ ಡಿ ಎಂ ಪದವಿ ಕಾಲೇಜು ಪಡೆಯಿತು. ಮೂರನೇ ಸ್ಥಾನವನ್ನು ಪ್ರಯೋಜನ ಕಾಲೇಜ್ ಪಡೆಯಿತು. ನಾಲ್ಕನೇ ಸ್ಥಾನವನ್ನು ಮಂಗಳೂರು ಯುನಿವರ್ಸಿಟಿ ಕಾಲೇಜ್ ಕೊಣಾಜೆ ಪಡೆಯಿತು.


ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗ ಪ್ರಮುಖರಾದ ಕೇಶವ ಬಂಗೇರ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಶ್ರೀಲಕ್ಷ್ಮಿ ಮಠದಮೂಲೆ, ರಾಜ್ಯ ಕಾರ್ಯಕಾರಣಿ ಸದಸ್ಯ ಪ್ರಣಮ್ ಶೆಟ್ಟಿ, ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ಮಂಗಳೂರು ತಾಲೂಕು ಸಂಚಾಲಕ ಶ್ರೇಯಸ್ ಶೆಟ್ಟಿ, ಮಂಗಳೂರು ಮಹಾನಗರ ಅಧ್ಯಕ್ಷೆ ಭಾರತಿ ಪ್ರಭು, ಮಂಗಳೂರು ಮಹಾನಗರ ಕಾರ್ಯದರ್ಶಿ ಆದಿತ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com