ವರದಿ : ದಿನೇಶ್ ರಾಯಪ್ಪನಮಠ
ವಿಜಯನಗರ : ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ತೆರಳುವ ದಾರಿ ಮಧ್ಯದಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹಾಯ ಹಸ್ತ ಚಾಚಿದ್ದಾರೆ.
ಹೊಸಪೇಟೆ ಗ್ರಾಮೀಣ ಭಾಗದ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದ ಮೂಲಕ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಮಾಡಿದರು.
Advertisement. Scroll to continue reading.
ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಅಪಘಾತಕ್ಕೀಡಾಗಿ ಗಾಯಗೊಂಡ ಸವಾರರನ್ನು ಆಸ್ಪತ್ರೆಗೆ ಸೇರಿಸಲು ತಮ್ಮ ವಾಹನವನ್ನು ನೀಡಿ, ಕಾರ್ಯಕಾರಣಿ ನಡೆಯುವ ಸ್ಥಳಕ್ಕೆ, ಸುಮಾರು 5 ಕಿ. ಮೀ ನಷ್ಟು ದೂರ ಬೈಕಿನ ಮೂಲಕ ತೆರಳಿ ಮಾನವೀಯತೆಯನ್ನು ಮೆರೆದಿರುತ್ತಾರೆ.
ಅಪಘಾತಕ್ಕೀಡಾದವರಿಗೆ ಸಹಾಯಹಸ್ತವನ್ನು ಚಾಚಿ, ಜನಸಾಮಾನ್ಯರಂತೆ ಬೈಕಿನಲ್ಲಿ ಸಮಾರಂಭದ ಸ್ಥಳಕ್ಕೆ ತೆರಳಿದ ಕೇಂದ್ರ ಸಚಿವರ ಈ ನಡೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement. Scroll to continue reading.