ಕರಾವಳಿ

ಕುಂದಾಪುರ : ಬಿಜೆಪಿ ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ: ಬೈಕಾಡಿ ಸುಪ್ರಸಾದ್ ಶೆಟ್ಟಿ

1

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು, ದೇಶಭಕ್ತಿ ಮತ್ತು ರಾಷ್ಟ್ರವಾದಿ ರಾಜಕಾರಣವನ್ನು ಮಾಡಿ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರನಿರ್ಮಾಣದ ತತ್ವವನ್ನು ನಂಬಿಕೊಂಡು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ನಮ್ಮದು ಎಂದು ಜಿಲ್ಲಾ ಉಪಾಧ್ಯಕ್ಷ, ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.


ಹಾಲಾಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ಹಾಲಾಡಿ ಮಹಾಶಕ್ತಿ ಕೇಂದ್ರದ ಪಕ್ಷ ಸಂಘಟನೆಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಕುಂದಾಪುರ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಇಡೀ ರಾಜ್ಯಕ್ಕೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement. Scroll to continue reading.

ಕುಂದಾಪುರ ಮಂಡಲದ ಹಾಲಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಂಕರ ಮೊಗವೀರ ಅಧ್ಯಕ್ಷತೆಯನ್ನು ವಹಿಸಿದರು.

ಸಭೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರ್ನಾಟಕ ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕುಂದಾಪುರದ ಬಿಜೆಪಿ ಕ್ಷೇತ್ರ ಅಧ್ಯಕ್ಷ ರಾದ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಹಾಗೂ ಜಿಲ್ಲಾ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೋಪಾಲ ಕಾಂಚನ ಉಪಸ್ಥಿತರಿದ್ದರು.

ವಂದೇ ಮಾತರಂ ಗೀತೆಯನ್ನು ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್ ಹಾಡಿದರು.


ಹಾಲಾಡಿ ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಶಂಕರ್ ಮೊಗವೀರ ಸ್ವಾಗತಿಸಿದರು.


ಕಾರ್ಯಕ್ರಮದ ನಿರೂಪಣೆ ಮತ್ತು ಧನ್ಯವಾದ ಸಮರ್ಪಣೆ ಯನ್ನು ಹಾಲಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಹೆಂಗವಳ್ಳಿ ನಿರ್ವಹಿಸಿದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com