ಹೆಬ್ರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ
Published
1
ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಉಡುಪಿ ಹಾಗೂ ದಕ್ಷಿಣ ಕನ್ನಡ ಕ್ಷೇತ್ರದ ನೂತನ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಪಕ್ಷದ ನಾಯಕ ಮಂಜುನಾಥ ಭಂಡಾರಿಯವರು ಶುಕ್ರವಾರ ಹೆಬ್ರಿಗೆ ಪ್ರಥಮ ಬಾರಿಗೆ ಆಗಮಿಸಿ ಕಾರ್ಯಕರ್ತರನ್ನು ಭೇಟಿ ಮಾಡಿದರು.
ಹೆಬ್ರಿಯ ಚೈತನ್ಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸಲು ಹಾಗೂ ಚುನಾವಣೆ ಎದುರಿಸಲು ಸನ್ನದ್ಧರಾಗಿರುವಂತೆ ಮನವಿ ಮಾಡಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ರಮೇಶ್ ಹೆಗ್ಡೆ ಸೀತಾನದಿ, ಎಚ್. ಬಿ ಸುರೇಶ್, ದಿನೇಶ್ ಶೆಟ್ಟಿ, ರಂಜನಿ ಹೆಬ್ಬಾರ್ ಮತ್ತು ರೋಶನಿ ಒಲಿವೆರಾ ಹಾಗೂ ವಿವಿಧ ಘಟಕದ ಪ್ರಮುಖರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.