ಕರಾವಳಿ

ಬ್ರಹ್ಮಾವರ : ವಾರಂಬಳ್ಳಿ ಗ್ರಾ.ಪಂ.ನಲ್ಲಿ ಕಸ ವಿಲೇವಾರಿಯ ಘಟಕಕ್ಕೆ ಸೂಕ್ತ ಜಾಗದ ತಪಾಸಣೆಯ ಕುರಿತು ಸಭೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ತಾಲೂಕು ಕೇಂದ್ರವಾದ ಬ್ರಹ್ಮಾವರದಲ್ಲಿ ವಾರಂಬಳ್ಳಿ, ಹಂದಾಡಿ, ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಣ ಮತ್ತು ಹಸಿ ಕಸ ವಿಲೇವಾರಿಯ ಘಟಕಕ್ಕೆ ಸೂಕ್ತ ಜಾಗದ ತಪಾಸಣೆಯ ಕುರಿತು ಉಡುಪಿ ಶಾಸಕ ರಘುಪತಿ ಭಟ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಮಂಗಳವಾರ ವಾರಂಬಳ್ಳಿ ಗ್ರಾಮ ಪಂಚಾಯತಿಯಲ್ಲಿ ಸಭೆ ಜರುಗಿತು.

ಮುಂದಿನ ದಿನದಲ್ಲಿ ಪುರಸಭೆ ರಚನೆಯಾದಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕ ನಿರ್ಮಾಣದ ಕುರಿತು ದೂರದರ್ಶಿತ್ವದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಚರ್ಚಿಸಲಾಯಿತು.

Advertisement. Scroll to continue reading.

ಬಳಿಕ ಇಲ್ಲಿನ ಹೊರವಲಯದಲ್ಲಿರುವ ಕೃಷಿ ಸಂಶೋಧನಾ ಕೇಂದ್ರ ಮತ್ತು ವಿಜ್ಞಾನ ಕೇಂದ್ರದಲ್ಲಿ 325 ಎಕ್ರೆ ಜಾಗದ ಒಂದು ಭಾಗದಲ್ಲಿ ಮಾಡುವ ಕುರಿತು ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್ , ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಿರ್ತಿ ರಾಜೇಶ್ ಶೆಟ್ಟಿ, ವಾರಂಬಳ್ಳಿ, ಹಂದಾಡಿ, ಚಾಂತಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು , ಪಂಚಾಯತ್ ಸದಸ್ಯರು ಹಾಗೂ ಟಿಪ್ ಸಂಸ್ಥೆಯವರು ಉಪಸ್ಥಿತರಿದ್ದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com