ರಾಷ್ಟ್ರೀಯ

ರಥೋತ್ಸವದ ವೇಳೆ ವಿದ್ಯುತ್ ಸ್ಪರ್ಶಿಸಿ 11 ಮಂದಿ ದುರ್ಮರಣ

1
FacebookTwitterEmailWhatsAppShare

ತಮಿಳುನಾಡು: ತಂಜಾವೂರು ಜಿಲ್ಲೆಯಲ್ಲಿ ದೇವಸ್ಥಾನದ ರಥೋತ್ಸವದ ವೇಳೆ ಹೈ ಟೆನ್ಷನ್ ಟ್ರಾನ್ಸ್‌ಮಿಷನ್ ಲೈನ್ ಸಂಪರ್ಕಕ್ಕೆ ಬಂದು ಮೂವರು ಮಕ್ಕಳು ಸೇರಿದಂತೆ 11 ಜನರು ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿದ್ದಾರೆ.

ಇಂದು ಮುಂಜಾನೆ ಸಮೀಪದ ಕಾಳಿಮೇಡು ಎಂಬಲ್ಲಿ ಅಪ್ಪರ್ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದಾಗ ಈ ದಾರುಣ ಘಟನೆ ನಡೆದಿದೆ.

ತಂಜಾವೂರಿನ ಅಪ್ಪರ ಸ್ವಾಮಿ ದೇವಾಲಯದಲ್ಲಿ ನಿನ್ನೆ ರಥೋತ್ಸವ ನಡೆಯುತ್ತಿತ್ತು. ಅಲಂಕೃತಗೊಂಡಿದ್ದ ರಥವನ್ನು ಗ್ರಾಮದ ಬೀದಿಗಳಲ್ಲಿ ಎಳೆಯಲಾಗುತ್ತಿತ್ತು. ಈ ವೇಳೆ ರಥಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

Advertisement. Scroll to continue reading.

ಮೃತರನ್ನು ಎಂ ಮೋಹನ್ (22), ಕೆ ಪ್ರತಾಪ್ (36), ಎ ಅನ್ಬಳಗನ್ (60), ಅವರ ಪುತ್ರ ರಾಘವನ್ (24), ಆರ್ ಸಂತೋಷ್ (15), ಟಿ ಸೆಲ್ವಂ (56), ಎಂ ರಾಜ್‌ಕುಮಾರ್ (14), ಆರ್ ಸ್ವಾಮಿನಾಥನ್ (56), ಎ ಗೋವಿಂದರಾಜ್, ಎಸ್ ಭರಣಿ (13), ನಾಗರಾಜ್ (60) ಎಂದು ಗುರ್ತಿಸಲಾಗಿದೆ. ಎಲ್ಲರೂ ಕಾಳಿಮೇಡು ಗ್ರಾಮದವರಾಗಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪ್ರಧಾನಿ ಘೋಷಣೆ:

ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕೂಡ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Advertisement. Scroll to continue reading.

Click to comment

You May Also Like

Uncategorized

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು. ಸಂತ ಮೇರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆರಾಲ್ಡ್ ಮೊನೀಸ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲೇ ಭವಿಷ್ಯದ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com