ಶಿವಮೊಗ್ಗ: ಸಿಗಂದೂರು ದೇವಸ್ಥಾನಕ್ಕೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 10 ಮಂದಿಗೆ ಗಾಯಗೊಂಡಿರೋ ಘಟನೆ ನಡೆದಿದೆ.
ರಾಮನಗರದ ಬಿಡದಿಯ ಪ್ರವಾಸಿಗರನ್ನು ಸಿಗಂದೂರು ದೇವಿಯ ದರ್ಶನಕ್ಕೆ ಕರೆದೊಯ್ಯುತ್ತಿದ್ದಂತ ಸಂದರ್ಭದಲ್ಲಿ, ಟಿಟಿ ಚಾಲಕನಿಗೆ ಫಿಟ್ಸ್ ಬಂದಿದೆ. ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇಳಿಜಾರು ರಸ್ತೆಯಲ್ಲಿಯೇ ಚಾಲಕನಿಗೆ ಫಿಟ್ಸ್ ಬಂದ ಕಾರಣ, ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಸ್ ರಸ್ತೆಯ ಪಕ್ಕಕ್ಕೆ ಉರುಳಿ ಬಿದ್ದಿದೆ.
Advertisement. Scroll to continue reading.
ಟಿಟಿ ಉರುಳಿ ಬಿದ್ದ ಪರಿಣಾಮ, ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಇತರೆ ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.