ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ನೇಮಕ ಮಾಡಿದೆ.
ಇಂದು ಪ್ರತಾಪ್ ರೆಡ್ಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಅಂದಹಾಗೇ 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವಂತ ಪ್ರತಾಪ್ ರೆಡ್ಡಿಯವರು, ಹಾಸನ ಜಿಲ್ಲೆಯ ಎಎಸ್ಪಿಯಾಗಿ ತಮ್ಮ ಸೇವೆಯನ್ನು ಆರಂಭಿಸಿದ್ದರು. ಅಲ್ಲದೇ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರು, ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
Advertisement. Scroll to continue reading.
ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಇಂದು ಅವರು ಕಮೀಷನರ್ ಕಚೇರಿಗೆ ತೆರಳಿ, ನಿರ್ಗಮಿತ ಆಯುಕ್ತ ಕಮಲ್ ಪಂತ್ ಅವರಿಂದ ಬ್ಯಾಟನ್ ಪಡೆಯುವ ಮೂಲಕ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.