ಹರಿಯಾಣ : ಟ್ರಕ್ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ, ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ಹರ್ಯಾಣದ ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಎಕ್ಸ್ಪ್ರೆಸ್ವೇಯ ಬಳಿ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 18 ಕಾರ್ಮಿಕರು ರಸ್ತೆ ಪಕ್ಕದಲ್ಲಿ ಮಲಗಿದ್ದಾಲರು. ನಿಯಂತ್ರಣ ತಪ್ಪಿದ ಟ್ರಕ್ ಅವರ ಮೇಲೆ ಹರಿದಿದೆ. ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತರು ಉತ್ತರ ಪ್ರದೇಶದ ಎರಡು ಜಿಲ್ಲೆಗಳಿಂದ ಬಂದವರಾಗಿತ್ತು, ಗುರುತು ಪತ್ತೆಯಾಗಿಲ್ಲ.
Advertisement. Scroll to continue reading.
ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮಲಗಲು ಜಾಗಕ್ಕಾಗಿ ರಸ್ತೆಯ ಒಂದು ಬದಿಯಲ್ಲಿ ಬ್ಯಾರಿಕೇಡ್ ಹಾಕಲಾಗಿತ್ತು. ಆದರೆ, ರಭಸದಿಂದ ಡಿಕ್ಕಿ ಹೊಡೆದ ಟ್ರಕ್, ಮಲಗಿದ್ದವರ ಮೇಲೂ ಹರಿದಿದೆ ಎನ್ನಲಾಗಿದೆ.