ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಭಾರತದ ತಂಡದ ನಾಯಕ ಕೆ.ಎಲ್.ರಾಹುಲ್ ಗಾಯದ ಕಾರಣ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜೂ.9 ರಿಂದ ಆರಂಭಗೊಳ್ಳಲಿರುವ ಸರಣಿ ಆರಂಭಿಕ ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿ ಈ ಮಾಹಿತಿ ಹೊತಬಿದ್ದಿದೆ. ಹೀಗಾಗಿ ರಿಷಭ್ ಪಂತ್ ತಂಡದ ನಾಯಕರಾಗಲಿದ್ದಾರೆ.
ಗಾಯದ ಕಾರಣದಿಂದ #INDvSA ಸರಣಿಯಿಂದ KL ರಾಹುಲ್ ಮತ್ತು ಕುಲದೀಪ್ ಯಾದವ್ ಹೊರಗುಳಿದಿದ್ದಾರೆ. ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ @Paytm #INDvSA ವಿರುದ್ಧದ ತವರು ಸರಣಿಗೆ ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ನಾಯಕ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ.
Advertisement. Scroll to continue reading.
ಬಲ ತೊಡೆಸಂದು ಗಾಯದಿಂದಾಗಿ ಕೆಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಯಿಂದ ಹೊರಗುಳಿದಿದ್ದಾರೆ, ಆದರೆ ಕುಲದೀಪ್ ಯಾದವ್ ನಿನ್ನೆ ಸಂಜೆ ನೆಟ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಬಲಗೈಗೆ ಪೆಟ್ಟಾದ ಕಾರಣ ಟಿ 20 ಐ ಸರಣಿಯಿಂದ ಹೊರಗುಳಿಯಲಿದ್ದಾರೆ. ಎಂದು ಬಿಸಿಸಿಐ ಮಾಹಿತಿ ನೀಡಿದೆ.