ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಗೊಳ್ಳಲಿರುವಂತ ನಾಲ್ಕು ಸ್ಥಾನಗಳಿಗೆ, ಇಂದು ವಿಧಾನಸೌಧದಲ್ಲಿ ಮತದಾನ ನಡೆಯಿತು. ಮತ ಎಣಿಕೆ ಕಾರ್ಯ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿದೆ.
ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋತಿದ್ದಾರೆ.
ಬಿಜೆಪಿಯ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೇಹರ್ ಸಿಂಗ್ ಸೇರಿ ಮೂವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ನ ಜೈರಾಂ ರಮೇಶ್ ಗೆದ್ದಿದ್ದಾರೆ.
Advertisement. Scroll to continue reading.
ಇಂದು ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆಯ ಮತದಾನ ನಡೆಯಿತು. 224 ಶಾಸಕರಲ್ಲಿ ಒಂದು ಮತ ಮಾತ್ರ ಅಡ್ಡಮತದಾನ ನಡೆದಿದೆ. ಬಹುತೇಕ ಶಾಸಕರು ಆಯಾ ಪಕ್ಷದ ಅಭ್ಯರ್ಥಿಗಳಿಗೆ ಕ್ರಾಸ್ ವೋಟಿಂಗ್ ಮಾಡದೇ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.