ನವದೆಹಲಿ : ಕೇಂದ್ರ ಸರ್ಕಾರ ಪ್ರಸ್ತುತ ಪಡಿಸಿರುವ ಅಗ್ನಿಪಥ್ ಹೆಸರಿನ ನೂತನ ಅಲ್ಪಾವಧಿ ಯೋಜನೆ ಖಂಡಿಸಿ ವಿವಿದೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಬಿಹಾರದಲ್ಲಿ ಪ್ರತಿಭಟನಾಕಾರರು ಇಟ್ಟ ಬೆಂಕಿಗೆ ರೈಲುಗಳು ಆಹುತಿಯಾಗಿದೆ. ಹೀಗಾಗಿ 34 ರೈಲುಗಳನ್ನು ರದ್ದುಗೊಳಿಸಲಾಗಿದೆ.
ಸಶಸ್ತ್ರ ಪಡೆಗಳಿಗೆ ಯುವಕರನ್ನು ನೇಮಿಸಿಕೊಳ್ಳುವ ‘ಅಗ್ನಿಪಥ್’ ಯೋಜನೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆಗಳ ವಿಳಂಬದಿಂದಾಗಿ ಗುರುವಾರ 34 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.
ಹಾಗೂ ಎಂಟು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಪ್ರತಿಭಟನೆಯಿಂದಾಗಿ 72 ರೈಲುಗಳು ತಡವಾಗಿ ಓಡುತ್ತಿದ್ದು, ಐದು ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳು ಮತ್ತು 29 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
Advertisement. Scroll to continue reading.
ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಹಲವು ರಾಜ್ಯಗಳಿಂದ ಪ್ರತಿಭಟನೆಗಳು ಮುಂದುವರಿದಿವೆ. ನಂಗ್ಲೋಯ್ನಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಯನ್ನು ತಡೆದು ಅಗ್ನಿಪಥ್ ಯೋಜನೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಗ್ನಿಪಥ್ ಯೋಜನೆ ಮತ್ತು ಆರ್ಆರ್ಬಿ ಪರೀಕ್ಷೆಗಳ ವಿಳಂಬದ ವಿರುದ್ಧ ಪ್ರತಿಭಟನೆ ಮಾಡಲು 15-20 ಜನರು ನಂಗ್ಲೋಯ್ ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದರು ಎನ್ನಲಾಗಿದೆ.