ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕಮಲಶಿಲೆ ಗ್ರಾಮದ ಹಳ್ಳಿಹೊಳೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ.
ಬೈಂದೂರು ಉಪ್ಪುಂದದ ಶ್ರೀಧರ ಮಡಿವಾಳ ಬಂಧಿತ ಆರೋಪಿ.
Advertisement. Scroll to continue reading.
ಜೂ.18 ರಂದು ರಾತ್ರಿ ಸುಮಾರು ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಕೋಣೆಯಲ್ಲಿ ಇರಿಸಿದ ಸುಮಾರು 1,30,000/- ಲಕ್ಷ ಬೆಲೆ ಬಾಳುವ 28 ಗ್ರಾಂ ತೂಕದ 2 ಚಿನ್ನದ ಬಳೆ ಸುಮಾರು 1,50,000 ಲಕ್ಷ ಬೆಲೆ ಬಾಳುವ ಮಲ್ಲಿಗೆ ಮಿಟ್ಟಿಯ 30 ಗ್ರಾಂ ನ ಉದ್ದ ಚಿನ್ನದ ಸರ -1, ಸುಮಾರು 20,000/-ಬೆಲೆ ಬಾಳುವ ಮೂರು ಹರಳಿನ 4 ಗ್ರಾಂ ಚಿನ್ನದ ಉಂಗುರ-1, ನಗದು ಹಣ 5000/- ರೂ ಕಳವುಗೈಯಲಾಗಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
3,00000 ಮೌಲ್ಯದ 2 ಚಿನ್ನದ ಬಳೆಗಳು, ಮಲ್ಲಿಗೆ ಮಿಟ್ಟಿಯ ಚಿನ್ನದ ಸರ, ಚಿನ್ನದ ಉಂಗುರ ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಎಮ್ . ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ರವರ ನಿರ್ದೇಶನದಂತೆ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ .ಕೆ , ಕುಂದಾಪುರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ರವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Advertisement. Scroll to continue reading.
ಈ ಕಾರ್ಯಚರಣೆಯಲ್ಲಿ ಶಂಕರನಾರಾಯಣ ಪೊಲೀಸ್ ಠಾಣಾ ಪಿಎಸ್ಐ ಶ್ರೀಧರ ನಾಯ್ಕ ಹಾಗೂ ಸುದರ್ಶನ್ ಪಿಎಸ್ಐ ಹಾಗೂ ಸಿಬ್ಬಂದಿಯವರಾದ ಸೀತರಾಮ ಶೆಟ್ಟಿಗಾರ, ರಾಘವೇಂದ್ರ , ಗೋಪಾಲ ಕೃಷ್ಣ, ಮಂಜುನಾಥ್ ರಾಕೇಶ್ ಅನಿಲ್ ಕುಮಾರ್ ವಿಲ್ಫ್ರೆಡ್ ಡಿಸೋಜ ವಿಲಾಸ್ ರಾಥೋಡ್, ಆಲಿಂಗರಾಯ ಕಾಟೆ, ಚಂದ್ರ ಕುಮಾರ್ , ಜಯರಾಮ ನಾಯ್ಕ ಪಾಲ್ಗೊಂಡಿದ್ದರು.