ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ

1

ನವದೆಹಲಿ : ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ  ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಈ ಹಿಂದೆ ಬೇರೆ ಹೆಸರು ಕೇಳಿ ಬಂದಿತ್ತು. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಮಹಾತ್ಮಾ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಸೇರಿದಂತೆ ಮೂವರು ಸಂಭಾವ್ಯರ ಹೆಸರು ಕೇಳಿ ಬಂದಿತ್ತು.

ಅಂತಿಮವಾಗಿ ಇದೀಗ ವಿರೋಧ ಪಕ್ಷದ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.

Advertisement. Scroll to continue reading.

ಬಿಜೆಪಿ ಆಡಳಿತದಲ್ಲಿ ಸಚಿವರಾಗಿದ್ದ ಮಾಜಿ ಅಧಿಕಾರಿ ಯಶವಂತ್ ಸಿನ್ಹಾ ಕಳೆದ ವರ್ಷ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಸೇರಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ, “ಟಿಎಂಸಿಯಲ್ಲಿ(TMC) ಮಮತಾ ಜೀ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿರೋಧ ಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ಅವರು ಈ ಹೆಜ್ಜೆಯನ್ನು ಅನುಮೋದಿಸುತ್ತಾರೆ ಎಂದು ನನಗೆ ಖಾತ್ರಿಯಿದೆ ”ಎಂದಿದ್ದಾರೆ.

ತೃಣಮೂಲ ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳ ನಂತರ ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ವಿರೋಧ ಪಕ್ಷಗಳು ಘೋಷಣೆ ಮಾಡಿವೆ

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com