ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಸ್ತಾಂತರ ಮಾಡಿದರು.
ಕೆಲ ದಿನಗಳ ಹಿಂದಷ್ಟೇ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅಬಮವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು. ಶನಿವಾರ ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ನೀಡಿದರು.
ಇನ್ನು ತಿಮ್ಮಕ್ಕ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ ೭ನೇ ಬ್ಲಾಕ್ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.
Advertisement. Scroll to continue reading.