ಕುಮಟಾ: ಪ್ರವಾಸಕ್ಕೆ ಬಂದು ಸಮುದ್ರಕ್ಕಿಳಿದಿದ್ದ ಇಬ್ಬರು ವಿದ್ಯಾರ್ಥಿಗಳು ಜಲ ಸಮಾಧಿಯಾಗಿದ್ದು, ಇಬ್ಬರ ರಕ್ಷಣೆ ಮಾಡಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್ ನಲ್ಲಿ ನಡೆದಿದೆ.
ಬೆಂಗಳೂರು ಮೂಲದ ಅರ್ಜುನ್ ಮತ್ತು ಚೈತ್ರಾ ಸಮುದ್ರದ ಅಲೆಗೆ ಸಿಲುಕಿ ಮೃತರಾದವರು. ಮೃತ ಯುವತಿ ಚೈತ್ರಾ ದೇಹ ಪತ್ತೆಯಾಗಿದ್ದು, ಅರ್ಜುನ್ ದೇಹಕ್ಕಾಗಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ನಡೆಯುತ್ತಿದೆ.
ಬೆಂಗಳೂರಿನಿಂದ 80 ಜನ ವಿದ್ಯಾರ್ಥಿಗಳ ತಂಡ ಶನಿವಾರ ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ ಗೆ ಬಂದಿದೆ.
Advertisement. Scroll to continue reading.
ಈ ವೇಳೆ ವಿದ್ಯಾರ್ಥಿಗಳು ಆಟವಾಡುವುದಕ್ಕೆ ಸಮುದ್ರಕ್ಕೆ ಇಳಿದ್ದಾರೆ. ಆದರೆ ಅಲೆಯ ರಭಸಕ್ಕೆ ನಾಲ್ಕು ಜನ ವಿದ್ಯಾರ್ಥಿಗಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬಂದು ಇಬ್ಬರನ್ನ ರಕ್ಷಿಸಿದ್ದಾರೆ.
ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.