ಬ್ರಹ್ಮಾವರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬಾರಕೂರು ಇವರ ವತಿಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರವು ಹನೆಹಳ್ಳಿ ಗ್ರಾಮದ ಕೂರಾಡಿ ವೆಲಂಕಣಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಆರಂಭಗೊಂಡಿತು.
ಕೇಂದ್ರವನ್ನು ಉದ್ಘಾಟಿಸಿದ ಬಾರಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರೋಹಿಣಿ ಮಾತನಾಡಿ, ಸರಕಾರ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಕೇಂದ್ರ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಪ್ರಾಥಮಿಕ ಆರೋಗ್ಯ ಸೇವೆಗೆ ಇದು ಉಪಯುಕ್ತವಾಗಲಿದೆ. ಗಂಭೀರ ಸಮಸ್ಯೆ ಕಂಡು ಬಂದಲ್ಲಿ ಉನ್ನತ ಆರೋಗ್ಯ ಕೇಂದ್ರಕ್ಕೆ ಶಿಪಾರಸು ಮಾಡಲಾಗುವುದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಹನೆಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Advertisement. Scroll to continue reading.
ಸಮುದಾಯ ಆರೋಗ್ಯ ಅಧಿಕಾರಿ ಸೌಮ್ಯ, ಆರೋಗ್ಯ ಸುರಕ್ಷಾ ಅಧಿಕಾರಿ ವಿದ್ಯಾ, ಗ್ರಾಮ ಪಂಚಾಯತಿ ಸದಸ್ಯರಾದ ಚಂದ್ರ ಮರಕಾಲ, ಮಲ್ಲಿಕಾ ಪೂಜಾರಿ, ಬಿ ಎಂ ಎಂ ಪ್ರೌಢಾ ಶಾಲಾ ಮುಖ್ಯೋಪದ್ಯಾಯ ಮೂರ್ತಿ ರಾವ್, ಗ್ರಾಮದ ಹಿರಿಯರಾದ ರವೀಂದ್ರನಾಥ್ ಶೆಟ್ಟಿ, ಶೇಖರ ಹೆಗ್ಡೆ ಇನ್ನಿತರರು ಉಪಸ್ಥಿತರಿದ್ದರು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯವರು ಹಾಜರಿದ್ದರು.