ಕಾಪು : ನದಿಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಟ್ಟು ಗ್ರಾಮದಲ್ಲಿ ನಡೆದಿದೆ.
45 ವರ್ಷದ ಗಣೇಶ್ ಮೃತ ವ್ಯಕ್ತಿ.
ಇವರು ಸಹೋದರನೊಂದಿಗೆ ಮಟ್ಟುಗ್ರಾಮದ ಪಾಪನಾಶಿನಿ ನದಿಗೆ ದೊಣಿಯಲ್ಲಿ ಹೋಗಿದ್ದು, ಮೀನು ಹಿಡಿಯುತ್ತಿರುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಈ ವೇಳೆ ಗಣೇಶ್ರವರು ದೋಣಿಯಿಂದ ನೀರಿಗೆ ಬಿದ್ದಿದ್ದಾರೆ. ಆ ಕೂಡಲೇ ಅವರನ್ನು ಅಲ್ಲಯೇ ಬೇರೆ ದೋಣಿಯಲ್ಲಿ ಮೀನು ಹಿಡಿಯುತ್ತಿದ್ದವರನ್ನು ಕೂಗಿ ಕರೆದು ಅವರ ಸಹಾಯದಿಂದ ಮೇಲಕ್ಕೆ ಎತ್ತಿ ದಡಕ್ಕೆ ಕರೆತರಲಾಯಿತು.
Advertisement. Scroll to continue reading.
ಗಣೇಶ್ರವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲದೇ ಇದ್ದು ಅವರನ್ನು ಕೂಡಲೇ ಮಟ್ಟುವಿನ ಕ್ಲಿನಿಕ್ಗೆ ಕರೆದುಕೊಂಡು ಹೋಗಲಾಯಿತು. ಪರೀಕ್ಷಿಸಿದ ಅಲ್ಲಿನ ನರ್ಸ ಉಡುಪಿಯ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಕೂಡಲೇ ಆಂಬುಲೆನ್ಸ್ ನಲ್ಲಿ ಗಣೇಶ್ರವರನ್ನು ಉಡುಪಿಯ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.