ಬೈಂದೂರು: ನಿಯಂತ್ರಣ ತಪ್ಪಿ ಮರವಂತೆ ಬೀಚ್ ಗೆ ಬಿದ್ದ ಕಾರು: ಓರ್ವ ಸಾವು ; ಇನ್ನೋರ್ವ ನಾಪತ್ತೆ
Published
4
ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕುಂದಾಪುರದಿಂದ ಬೈಂದೂರು ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ತ್ರಾಸಿ-ಮರವಂತೆ ಕಡಲ ಕಿನಾರೆಗೆ ರಾ.ಹೆ ರಸ್ತೆಯಿಂದ ಸುಮಾರು 40 ಅಡಿ ಕೆಳಭಾಗದಲ್ಲಿ ಪಲ್ಟಿ ಹೊಡೆದು ಬಿದ್ದಿದೆ.
ಕಾರಿನಲ್ಲಿದ್ದ ಒಟ್ಟು 4 ಮಂದಿ ಪೈಕಿ ಇಬ್ಬರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ.
Advertisement. Scroll to continue reading.
ತಡರಾತ್ರಿ ನಡೆದ ಘಟನೆಯಲ್ಲಿ ಉದ್ಯಮಿ ನೇರಂಬಳ್ಳಿ ರಮೇಶ್ ಆಚಾರ್ ಅವರ ಪುತ್ರ ವಿರಾಜ್ ಆಚಾರ್ ಮೃತಪಟ್ಟಿದ್ದಾರೆ. ಸಹ ಪ್ರಯಾಣಿಕ ರೋಶನ್ ನಾಪತ್ತೆಯಾಗಿದ್ದಾರೆ. ಗಾಯಾಳುಗಳಾದ ಸಂದೇಶ್ ಹಾಗೂ ಕಾರ್ತಿಕ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ, ಮತ್ತು ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಠಾಣಾಧಿಕಾರಿ ಸುಧಾಪ್ರಭು ಭೇಟಿ ನೀಡಿದ್ದಾರೆ.
ಸ್ಥಳೀಯ ರಕ್ಷಣಾ ಕಾರ್ಯಕರ್ತರು ಅಗ್ನಿಶಾಮಕ ದಳದೊಂದಿಗೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.