ನವದೆಹಲಿ: ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಯಿಂದ ಶನಿವಾರ 7ನೇ ಆರೋಪಿಯನ್ನು ಬಂಧಿಸಲಾಗಿದೆ.
ಫರ್ಹಾದ್ ಮೊಹಮ್ಮದ್ ಶೇಖ್ ಬಂಧಿತ. ಇದರೊಂದಿಗೆ ಬಂಧಿತರ ಸಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಎನ್ಐಎ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸಂಜೆ ಶೇಖ್ ಅಲಿಯಾಸ್ ಬಬ್ಲಾನನ್ನು ಬಂಧಿಸಲಾಗಿದ್ದು, ಆತ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರಿಯಾಜ್ ಅಖ್ತಾರಿಯಾ ಆಪ್ತ ಎಂದು ತಿಳಿದುಬಂದಿದೆ. ಈತ ಟೈಲರ್ ಹತ್ಯೆ ಪಿತೂರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಎನ್ನಲಾಗಿದೆ.
Advertisement. Scroll to continue reading.
ಕಳೆದ ಜೂನ್ 28 ರಂದು ಟೈಲರ್ ಕನ್ಹಯ್ಯಾ ಲಾಲ್ ಬಳಿ ಬಟ್ಟೆ ಹೊಲಿಯಲು ಅಳತೆ ಕೊಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಹಲ್ಲೆ ಮಾಡಿ ಚಾಕುವಿನಿಂದ ಶಿರಚ್ಚೇದ ಮಾಡಿದ್ದರು. ಈ ಕ್ರೂರ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿಂದೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪರವಾಗಿ ಕನ್ಹಯ್ಯಾ ಲಾಲ್ ಅವರ ಪೋಸ್ಟ್ ಗೆ ಸೇಡು ತೀರಿಸಿಕೊಳ್ಳಲು ಈ ಕೃತ್ಯ ಎಸಗಲಾಗಿತ್ತು.