ದೆಹಲಿ : ಭಾರತದ 94 ವರ್ಷದ ಓಟಗಾರ್ತಿ ಭಗವಾನಿ ದೇವಿ ದಾಗರ್ ಅವರು ಇತ್ತೀಚೆಗೆ ಫಿನ್ಲ್ಯಾಂಡ್ನ ಟಂಪೆರೆಯಲ್ಲಿ ನಡೆದ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಈ ಬಗ್ಗೆ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದು, ಭಗವಾನಿ 24.74 ಸೆಕೆಂಡುಗಳಲ್ಲಿ ಗುರಿ ತಲುಪಿ ಚಿನ್ನ ಗೆದ್ದಿದ್ದಾರೆ ಎಂದು ತಿಳಿಸಿದೆ.
ಹೆಚ್ಚುವರಿಯಾಗಿ, ಅವರು ಶಾಟ್ಪುಟ್ನಲ್ಲಿ ಕಂಚಿನ ಪದಕವನ್ನು ಸಹ ಪಡೆದರು. ‘ನಿಜವಾಗಿಯೂ ಇದು ಶ್ಲಾಘನೀಯ ಪ್ರಯತ್ನ’ ಎಂದು ಕ್ರೀಡಾ ಇಲಾಖೆ ಅಭಿನಂದಿಸಿದೆ.
Advertisement. Scroll to continue reading.
ದೆಹಲಿ ಸಿಎಂ ಶ್ಲಾಘನೆ ;
ದೆಹಲಿ ಸಿಎಂ ಕೇಜ್ರಿವಾಲ್ ಭಗವಾನಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ. ’94 ನೇ ವಯಸ್ಸಿನಲ್ಲಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕಾಗಿ ಪ್ರಶಸ್ತಿಗಳನ್ನು ಗೆದ್ದಿರುವ ಭಗವಾನಿ ದೇವಿ ಜಿ ಅವರನ್ನು ನಾನು ಅಭಿನಂದಿಸುತ್ತೇನೆ. ಅವರ ಆತ್ಮ ಮತ್ತು ಶಕ್ತಿ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ. ಭಾರತವು ನಿಮ್ಮ ಬಗ್ಗೆ ಭಾರತ ಹೆಮ್ಮೆಪಡುತ್ತದೆʼ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದಲ್ಲದೆ, ಹರಿಯಾಣ ಮುಖ್ಯಮಂತ್ರಿ ಮನ್ಹೋರ್ ಲಾಲ್ ಖಟ್ಟರ್ ಅವರು ಭಗವಾನಿ ಅವರನ್ನು ಅಭಿನಂದಿಸಿದ್ದಾರೆ. ʻ94ರ ಹರೆಯದಲ್ಲೂ ಇಡೀ ವಿಶ್ವಕ್ಕೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಫಿನ್ಲ್ಯಾಂಡ್ನ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಸೇರಿದಂತೆ 3 ಪದಕಗಳನ್ನು ಗೆದ್ದಿದ್ದಕ್ಕಾಗಿ ಭಗವಾನಿ ದೇವಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ಈ ಸಾಧನೆಯು ಯುವಜನರಲ್ಲಿ ಉತ್ಸಾಹವನ್ನು ತುಂಬಲು ಕೆಲಸ ಮಾಡುತ್ತದೆ’ ಎಂದು ಖಟ್ಟರ್ ಅವರು ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.