ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ
Published
0
ಕುಂದಾಪುರ: ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ ಕೋವಿಡ್ ಲಸಿಕೆ (ಕೊವಿಶೀಲ್ಡ್) ವಿತರಣೆಗೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಚಾಲನೆ ನೀಡಲಾಯಿತು. ರಾಜ್ಯ ಸರಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಲಸಿಕೆ ವಿತರಣೆಗೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಭಾರತಕ್ಕೆ ನಿಜವಾಗಿಯೂ ಇದು ಸುದಿನ. ಕಳೆದೊಂದು ವರ್ಷದಿಂದ ಕೊರೊನಾದಿಂದ ಹೈರಾಣಾಗಿದ್ದ ಜನ ಈಗ ಸ್ವಲ್ಪ ಮಟ್ಟಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇನ್ನಾದರೂ ಈ ಕೊರೊನಾ ವೈರಸ್ ಭಾರತದಿಂದ ತೊಲಗಲಿ. ಆದಷ್ಟು ಬೇಗ ದೇಶ ಕೊರೊನಾ ಮುಕ್ತವಾಗಲಿ ಎಂದ ಅವರು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಕುಂದಾಪುರ ತಾ.ಪಂ. ಅಧ್ಯಕ್ಷೆ ಇಂದಿರಾ ಶೆಟ್ಟಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು, ಜಿ.ಪಂ. ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ತಹಶೀಲ್ದಾರ್ ಆನಂದಪ್ಪ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.