ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ತುರ್ತು ಸುದ್ದಿಗೋಷ್ಠಿಯನ್ನು ಕರೆದಿದ್ದು, ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ
ಕಾರ್ಯಕ್ರಮ ನಡೆಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಕಾರ್ಯಕ್ರಮ ರದ್ದುಪಡಿಸಲು ನಿರ್ಧರಿಸಿದೆ. ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅತ್ಯಂತ ಅಮಾಯಕ ಯುವಕನ ಕೊಲೆ ಆಗಿದೆ. ಈ ಯುವಕನ ತಾಯಿಯ ಆಕ್ರಂದನ ನೋಡಿ ಮನಸ್ಸಿಗೆ ನೋವಾಯಿತು. ಈ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಸುವುದು ಸೂಕ್ತ ಅಲ್ಲ ಎಂಬ ಕಾರಣಕ್ಕಾಗಿ ಜನೋತ್ಸವ ಹಾಗೂ ಸಾಧನಾ ಸಮಾವೇಶ ರದ್ದು ಗೊಳಿಸಲಾಗಿದ್ದು, ಬದಲಾಗಿ ಕೇವಲ ಪತ್ರಿಕಾಗೋಷ್ಠಿ ಮಾತ್ರ ಇರುತ್ತದೆ ಎಂದರು. ಈ ಬಗ್ಗೆ ದೊಡ್ಡ ಬಳ್ಳಾಪುರದ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದರು.
Advertisement. Scroll to continue reading.
ಹಿಂಸೆಯ ಮೂಲಕ ದ್ವೇಷ ಬಿತ್ತುವ ಹುನ್ನಾರ ಹಿನ್ನೆಲೆಯಲ್ಲಿ ಈ ಕೃತ್ಯವಾಗಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ, ಕೇರಳ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂತಹ ಕೃತ್ಯಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು. ಜಾರಿಯಲ್ಲಿರುವ ಕಾನೂನಿನ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಕಾನೂನು ಕ್ರಮ ಜರಗಿಸಲು ಚಿಂತನೆ ಇದೆ ಎಂದರು.