ಭಟ್ಕಳ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ. ಲಕ್ಷ್ಮಿ ನಾರಾಯಣ ನಾಯ್ಕ, ಅನಂತ ನಾರಾಯಣ ನಾಯ್ಕ್, ಮಗಳು ಲಕ್ಷ್ಮಿ ,ಹಾಡುವಳ್ಳಿ ಬಡಬಾಗಿಲಿನ ತಂಗಿಮಗ ಪ್ರವೀಣ್ ರಾಮಕೃಷ್ಣ ನಾಯ್ಕ ಎಂದು ಗುರುತಿಸಲಾಗಿದೆ.
ಬೆಳಗ್ಗೆ 4 ಘಂಟೆಯ ವೇಳೆ ಘಟನೆ ನಡೆದಿದ್ದು, ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯ ತಡವಾಗಿದೆ. ಬೆಳಿಗ್ಗೆ 8 ಘಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮಧ್ಯಾಹ್ನ ಒಂದು ಘಂಟೆಯ ವೇಳೆ ನಾಲ್ಕು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.
Advertisement. Scroll to continue reading.
ಅಗ್ನಿಶಾಮಕ ಸಿಬ್ಬಂದಿ, ಪೊಲಿಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ದುರಂತ ನಡೆದ ಸ್ಥಳದಲ್ಲಿ ಜೆಸಿಬಿ ಮೂಲಕ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದ್ದೆ.