ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸಿಎಂ ಯಡಿಯೂರಪ್ಪ ಭೇಟಿ
Published
0
ಕಾಪು : ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯಸಿಎಂರನ್ನು ಗೌರವಿಸಿದರು. ಸುಮಾರು 35 ಕೋ.ರೂ.ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ನಡೆಯಲಿದ್ದು, ಇದಕ್ಕಾಗಿ 5 ಕೋ.ರೂ.ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 10 ಕೋ.ರೂ. ಬಿಡುಗಡೆ ಮಾಡುವಂತೆ ಮನವಿ ಸಿಎಂ ಬಳಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ರಘುಪತಿ ಭಟ್, ಉಡುಪಿ ಜಿ.ಪಂ.ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸದಸ್ಯೆ ಶಿಲ್ಪಾ ಜಿ.ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಸುರೇಶ್ ನಾಯಕ್, ಮೊದಲಾದವರು ಉಪಸ್ಥಿತರಿದ್ದರು.