ರಾಷ್ಟ್ರೀಯ

ಭೀಮಾ ಕೋರೆಗಾಂವ್ ಪ್ರಕರಣ : ಕವಿ ಡಾ.ಪಿ.ವರವರ ರಾವ್‌ಗೆ ಜಾಮೀನು ಮಂಜೂರು

1

ನವದೆಹಲಿ : ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುವ ಕವಿ ಡಾ.ಪಿ.ವರವರ ರಾವ್(84) ಅವರಿಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.

ನಿಷೇಧಿತ ಮಾವೋವಾದಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಅವರಿಗೆ ಶಾಶ್ವತ ಜಾಮೀನು ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ವರವರ ರಾವ್ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯಲ್ಲಿ ಈ ಆದೇಶ ನೀಡಿದೆ.

Advertisement. Scroll to continue reading.

ವರವರ ಅವರ ವಯಸ್ಸು, ಅವರ ವೈದ್ಯಕೀಯ ಸ್ಥಿತಿಗಳು ಮತ್ತು ಅವರು ಕಳೆದ ಎರಡೂವರೆ ವರ್ಷಗಳ ವಾಸ್ತವಿಕ ಕಸ್ಟಡಿ ಅವಧಿಯನ್ನು ನ್ಯಾಯಪೀಠವು ಗಣನೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ವಿಚಾರಣೆ ಇನ್ನೂ ಪ್ರಾರಂಭವಾಗಿಲ್ಲ ಮತ್ತು ಚಾರ್ಜ್ ಶೀಟ್ ಸಲ್ಲಿಸಲಾಗಿದ್ದರೂ ಆರೋಪಗಳನ್ನು ಸಹ ರೂಪಿಸಲಾಗಿಲ್ಲ ಎಂದು ನ್ಯಾಯಪೀಠವು ಪರಿಶೀಲಿಸಿದೆ.

2018ರ ಆಗಸ್ಟ್ 28ರಂದು ವರವರ ರಾವ್ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಗಿತ್ತು. ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು 2018ರ ಜನವರಿ 8ರಂದು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದರು. ಸುಪ್ರೀಕೋರ್ಟ್ ಆದೇಶದನ್ವಯ ವರವರ ರಾವ್ ಅವರನ್ನು ಮೊದಲಿಗೆ ಗೃಹ ಬಂಧನದಲ್ಲಿರಿಸಲಾಗಿತ್ತು. 2018ರ ನವೆಂಬರ್ 17ರಂದು ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ತಲೋಜಾ ಜೈಲಿಗೆ ಹಾಕಲಾಗಿತ್ತು. 2021ರ ಫೆಬ್ರವರಿ 22ರಂದು ವೈದ್ಯಕೀಯ ಆಧಾರದ ಮೇಲೆ ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com