ಸಾಲಿಗ್ರಾಮ ಪಟ್ಟಣ ಪಂಚಾಯತ್ : ಸ್ವಾತಂತ್ರ್ಯೋತ್ಸವ, ಸಾಧಕರಿಗೆ ಸನ್ಮಾನ
Published
0
ಸಾಲಿಗ್ರಾಮ : ಸ್ವಾತಂತ್ರ್ಯ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಧ್ವಜಾರೋಹಣ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಎಸ್. ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು.
ಈ ವೇಳೆ ಅತ್ಯಧಿಕ ಅಂಕಗಳಿಸಿದ 17 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 17 ಜನ ಸಾಧಕರನ್ನು ಗೌರವಿಸಲಾಯಿತು.
Advertisement. Scroll to continue reading.
ಈ ಸಂದರ್ಭ ಸರ್ವಕ್ಷೇಮ ಆಯುರ್ವೇದ ಚಿಕಿತ್ಸಾಲಯದ ಡಾ. ವಿವೇಕ್ ಉಡುಪ, ಸಾಹಿತಿ, ನಿವೃತ್ತ ಶಿಕ್ಷಕ ಪಾರಂಪಳ್ಳಿ ನರಸಿಂಹ ಐತಾಳ್, ಮುಖ್ಯಾಧಿಕಾರಿ ಶಿವನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ ಉಪಸ್ಥಿತರಿದ್ದರು.
ಸಿಬ್ಬಂದಿ ಸುಮಿತಾ ಸ್ವಾಗತಿಸಿ, ಕಾರ್ಯಕ್ರಮವನ್ನು ಶಿಕ್ಷಕ ಶ್ರೀಧರ ಶಾಸ್ತ್ರೀ ನಿರ್ವಹಿಸಿದರು. ಸಿಬ್ಬಂದಿ ಚಂದ್ರಶೇಖರ ಸೋಮಯಾಜಿ ವಂದಿಸಿದರು.