ಶಿವಮೊಗ್ಗ: ಜಿಲ್ಲೆಯಲ್ಲಿ ನಿಷೇಧಾಜ್ಞೆ ನಡುವೆಯೂ ಭದ್ರಾವತಿಯಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ. ಕಾರ್ಯಕರ್ತನ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ.
ಕಾರ್ಯಕರ್ತನ ಸುನೀಲ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾರೆ ಎನ್ನಲಾಗಿದೆ.
ಭದ್ರಾವತಿ ನಗರದ ನೆಹರೂ ಬಡವಾಣೆಯಲ್ಲಿ ಘಟನೆ ನಡೆದಿದ್ದು, ಗಾಯಾಳು ಸುನೀಲ್ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಚ್ಚಿ ಅಲಿಯಾಸ್ ಮುಬಾರಕ್ ಸೇರಿ ಮೂವರಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.
Advertisement. Scroll to continue reading.
ಈ ಘಟನೆ ಇಬ್ಬರ ನಡುವಿನ ಹಳೆಯ ವೈಮನಸ್ಯಕ್ಕೆ ನಡೆದಿದ್ದು ಎಂದು ಹೇಳಲಾಗಿದೆ. ಹಳೇ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Advertisement. Scroll to continue reading.