ಉಡುಪಿ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಸ್ವಾತಂತ್ರ್ಯೋತ್ಸವ
Published
2
ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ ಉಡುಪಿ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಮಾರಂಭ ಬೊಬ್ಬರ್ಯ ದೈವಸ್ಥಾನದಲ್ಲಿ ವಠಾರದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವಿ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಒಕ್ಕೂಟದ ಹಿರಿಯ ಹಾಗೂ ಸದಸ್ಯ, ಉಡುಪಿ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ದೈವಚಾಕ್ರಿ ಮಾಡುತ್ತಿರುವ ಸರಳ ಸಜ್ಜನಿಕೆ ಹೆಸರಾಂತ ಕೊರಗ ಸಮುದಾಯದ ಡೋಲು ಬಾರಿಸುವ ಮೂಲಕ ದೈವಚಾಕ್ರಿ ಮಾಡಿದಂತ ಬಾಬು ಅಲೆವೂರ್ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬೊಬ್ಬರ್ಯ ಯುವ ಸೇವ ಸಮಿತಿ ಅಧ್ಯಕ್ಷ ವರದರಾಜ ಕಾಮತ್ ಉಡುಪಿ, ಬ್ರಹ್ಮಾವರ ಘಟಕದ ಅಧ್ಯಕ್ಷ ಹಾಗೂ ಉಡುಪಿ ಕೋಶಾಧಿಕಾರಿ ಶ್ರೀಧರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಪೂಜಾರಿ, ಮಹೇಶ್ ಪಂಬದ,, ವಾಮನ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.