ಶಿವಮೊಗ್ಗ : ರೈಲ್ವೆ ಕ್ರಷರ್ ನಲ್ಲಿ ಭಾರೀ ಸ್ಪೋಟ; 15 ಕಾರ್ಮಿಕರ ದೇಹ ಛಿದ್ರ
Published
0
ಶಿವಮೊಗ್ಗ: ರೈಲ್ವೇ ಕ್ರಷರ್ನಲ್ಲಿ ಭಾರಿ ಸ್ಫೋಟ ಉಂಟಾಗಿ ಕಾರ್ಮಿಕರು ಮೃತಪಟ್ಟಿರುವ ಘಟನೆ
ಶಿವಮೊಗ್ಗದ ಹುಣಸೋಡಿನಲ್ಲಿ ನಡೆದಿದೆ. ಕನಿಷ್ಠ 15 ಕಾರ್ಮಿಕರು ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಅಕ್ರಮ ಕಲ್ಲು ಗಣಿಗಾರಿಕೆಗಾಗಿ ಸುಮಾರು 50 ಡೈನಮೈಟ್ಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಡೈನಮೈಟ್ ಸಿಡಿದು ದುರ್ಘಟನೆ ನಡೆದಿದೆ.
ರಾತ್ರಿ ಸುಮಾರು 10-20 ರಿಂದ 10-25ರ ವೇಳೆಗೆ ಶಿವಮೊಗ್ಗದಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿತ್ತು. ಇದು ಭೂಕಂಪ ಎಂದೇ ಭಾವಿಸಲಾಗಿತ್ತು. ಆದರೆ ಇದು ವಾಸ್ತವವಾಗಿ ಅಕ್ರಮ ಕಲ್ಲು ಕ್ವಾರಿಯಲ್ಲಿ ಉಂಟಾದ ಸ್ಫೋಟ ಎಂದು ತಿಳಿದುಬಂದಿದೆ. ಇಲ್ಲಿ ಸ್ಥಳೀಯರು ಕೂಡ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.