ಕರಾವಳಿ

ಬೈಂದೂರು : ರಾಜೀವ ಗಾಂಧಿ ವಸತಿ ಯೋಜನೆಯಲ್ಲಿ ಶೀಘ್ರ ಫಲಾನುಭವಿಗಳ‌ ಆಯ್ಕೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿ

4

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಬೈಂದೂರು ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿ ಇತ್ತೀಚಿಗೆ ಕೊಲ್ಲೂರಿನಲ್ಲಿ ವಸತಿ ಸಚಿವ ವಿ. ಸೋಮಣ್ಣ ಭೇಟಿ ಮಾಡಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈವರೆಗೆ 1466 ಮನೆಗಳನ್ನು ನೀಡಿದ್ದು, ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರ ನೀಡಲಾಗಿದೆ. ಇನ್ನೂ ಹೆಚ್ಚುವರಿಯಾಗಿ ಅನೇಕರು ವಸತಿ ಯೋಜನೆಗೆ ಕಾಯುತ್ತಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಮನೆ ನಿರ್ಮಿಸಲು ಕಷ್ಟಪಡುತ್ತಿರುವ ಬಗ್ಗೆ ಅವರ ಗಮನ ಸೆಳೆಯಲಾಯಿತು. ಈ ಬಗ್ಗೆ ಪೂರಕವಾಗಿ ಸ್ಪಂದಿಸಿದ ಸಚಿವರು ತಕ್ಷಣ 2000 ಮನೆಯನ್ನು ಬೈಂದೂರು ಕ್ಷೇತ್ರಕ್ಕೆ ಮಂಜೂರು ಮಾಡಿಸಲು ಆದೇಶಿಸಿದರು.

ಪ್ರತಿಯನ್ನು ರಾಜೀವ ಗಾಂಧಿ ವಸತಿ ನಿಗಮ ವ್ಯವಸ್ಥಾಪಕ ನಿರ್ದೇಶಕರು ಇವರನ್ನು ಭೇಟಿಯಾಗಿ ಕ್ಷೇತ್ರಕ್ಕೆ 2000 ಮನೆ ನಿರ್ಮಾಣಕ್ಕೆ ಸರ್ಕಾರದ ವತಿಯಿಂದ ಕ್ರಮ ವಹಿಸುವಂತೆ ವಿನಂತಿಸಲಾಗಿದೆ. ಈ ಸಂಬಂಧ ಇಂದು ಬೈಂದೂರು ಮತ್ತು ಕುಂದಾಪುರ ತಾಲೂಕು ಕಾರ್ಯನಿರ್ವಹಾಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ಶೀಘ್ರ ಫಲಾನುಭವಿಗಳ ಆಯ್ಕೆ ಮಾಡುವಂತೆ ನಿರ್ದೇಶಿಸಲಾಗಿದೆ.

Advertisement. Scroll to continue reading.
Click to comment

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com