ರಾಜ್ಯ

ರೈಲಿನಡಿ ಸಿಲುಕಿ ಎಂಟು ಅಡಿ ಉದ್ದದ ಮೊಸಳೆ ಸಾವು

1

ಗದಗ: ರೈಲಿನಡಿ ಸಿಲುಕಿ ಮೊಸಳೆ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿದೆ.

ಹಳೇ ಆಲೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಅಧಿಕಾರಿಗಳ ಪ್ರಕಾರ, ಮೊಸಳೆ ಮಲಪ್ರಭಾ ನದಿಯಿಂದ ಹೊರಬಂದು ಹಳಿ ದಾಟುವಾಗ ರೈಲಿಗೆ ಸಿಲುಕಿದೆ. ಎಂಟು ಅಡಿ ಉದ್ದದ ಮೊಸಳೆ ಎರಡು ತುಂಡುಗಳಾಗಿದೆ.

Advertisement. Scroll to continue reading.

ಇದನ್ನು ಗಮನಿಸಿದ ಸ್ಥಳೀಯರು ಮೊಸಳೆಯ ಮೃತದೇಹವನ್ನು ಹಳಿಯಿಂದ ಹೊರತೆಗೆದಿದ್ದಾರೆ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸತ್ತ ಮೊಸಳೆ ದೇಹವನ್ನು ವಿಲೇವಾರಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

    Click to comment

    You May Also Like

    ಕರಾವಳಿ

    2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

    Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com