ರಾಜ್ಯ

ಶಿವಮೊಗ್ಗ ಗಲಭೆ ಪ್ರಕರಣ: ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ; ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

2

ಶಿವಮೊಗ್ಗ:  ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ.

ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿತು. ಈ ಸಂದರ್ಭ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಜನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದೆ. ಅಲ್ಲದೇ, ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದೆ.ಈ ಹಿನ್ನೆಲೆಯಲ್ಲಿ ರಾಗಿಗುಡ್ಡದಲ್ಲಿ ಪೊಲೀಸ್ ಭದ್ರತೆ ವಹಿಸಲಾಗಿದೆ.

Advertisement. Scroll to continue reading.

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಹಲವು ಮನೆಗಳಿಗೆ ಹಾನಿಯಾಗಿತ್ತು. ಈ ವೇಳೆ ಪೊಲೀಸರ ಮೇಲೂ ಹಲ್ಲೆಗಳಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. 

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com