ನವದೆಹಲಿ : ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಆರಿಜ್ ಖಾನ್ಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ಆರಿಜ್ ಖಾನ್’ಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಹೈಕೋರ್ಟ್ ಜೀವಾವಧಿ ಶಿಕ್ಷೆಗೆ ಇಳಿಸಿದೆ.
ಈ ವರ್ಷದ ಆಗಸ್ಟ್ 18ರಂದು, ದೆಹಲಿ ಪೊಲೀಸರು ಮತ್ತು ಅಪರಾಧಿಯ ವಾದಗಳನ್ನ ಆಲಿಸಿದ ನಂತರ, ಹೈಕೋರ್ಟ್ ತನ್ನ ತೀರ್ಪನ್ನ ಕಾಯ್ದಿರಿಸಿತ್ತು.
Advertisement. Scroll to continue reading.
2008ರಲ್ಲಿ ದೆಹಲಿ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರನ್ನು ಎನ್ ಕೌಂಟರ್ನಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. 2021ರಲ್ಲಿ, ದೆಹಲಿಯ ಸಾಕೇತ್ ನ್ಯಾಯಾಲಯವು ಬಾಟ್ಲಾ ಹೌಸ್ ಎನ್ಕೌಂಟರ್ಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ತೀರ್ಪನ್ನ ನೀಡಿತು.
ಈ ಪ್ರಕರಣದಲ್ಲಿ ಸಾಕೇತ್ ನ್ಯಾಯಾಲಯವು ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಆರಿಜ್ ಖಾನ್’ನನ್ನ ದೋಷಿ ಎಂದು ಘೋಷಿಸಿ ಮರಣದಂಡನೆ ವಿಧಿಸಿತ್ತು. ಎನ್ಕೌಂಟರ್ ನಂತರ ಸುಮಾರು ಒಂದು ದಶಕದ ಕಾಲ ತಲೆಮರೆಸಿಕೊಂಡಿದ್ದ ಆರಿಜ್ ಖಾನ್ ಅಲಿಯಾಸ್ ಜುನೈದ್ನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ 2018ರಲ್ಲಿ ಬಂಧಿಸಿತ್ತು.
ಶರ್ಮಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಶಿಕ್ಷೆ ಮತ್ತು ಮರಣದಂಡನೆಯನ್ನು ಪ್ರಶ್ನಿಸಿ ಆರಿಜ್ ಖಾನ್ ಸಲ್ಲಿಸಿದ್ದ ಮೇಲ್ಮನವಿಯ ಮೇರೆಗೆ ನ್ಯಾಯಮೂರ್ತಿ ಸಿದ್ಧಾರ್ಥ ಮೃದುಲ್ ಮತ್ತು ನ್ಯಾಯಮೂರ್ತಿ ಅಮಿತ್ ಶರ್ಮಾ ನೇತೃತ್ವದ ನ್ಯಾಯಪೀಠ ಈ ಆದೇಶವನ್ನ ಹೊರಡಿಸಿದೆ.
ದೆಹಲಿಯ ಬಾಟ್ಲಾ ಹೌಸ್ನಲ್ಲಿರುವ ಎಲ್ -18 ಪ್ಲ್ಯಾಟ್ನಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದರು. ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಹುತಾತ್ಮರಾಗಿದ್ದರು.
Advertisement. Scroll to continue reading.