ಪರ್ಕಳ : ರಸ್ತೆ ವಿಭಾಜಕದ ಬಳಿ ಬೈಕ್ ಸವಾರರೊಬ್ಬರು ಅಪಘಾತದಿಂದ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬುಧವಾರ ನಸುಕಿನ ಜಾವ ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹಿರಿಯಡ್ಕ ಕೊಂಡಾಡಿಯ ಮಂಜೊಟ್ಟಿ ಪದ್ಮನಾಭ ಭಟ್ ಅವರ ಪುತ್ರ ನಿವಾಸಿ ಅಕ್ಷಯ ಭಟ್ (26) ಮೃತ ಯುವಕ. ಯುವಕ ಅವಿವಾಹಿತನಾಗಿದ್ದು, ಅಡಿಗೆ ವೃತ್ತಿ ಮಾಡಿಕೊಂಡಿದ್ದರು. ಇಂದ್ರಾಳಿಯ ದೇವ ಸ್ಥಾನವೊಂದರಲ್ಲಿ ನವರಾತ್ರಿಯ ಸಾರ್ವಜನಿಕ ಅನ್ನಸಂತರ್ಪಣೆ ಅಡುಗೆ ಕೆಲಸ ನಿರ್ವಹಿಸಲು ಮನೆಯಿಂದ ಬರುವ ಸಮಯ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮಣಿಪಾಲ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳಕ್ಕೆ ಬಂದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಶವವನ್ನು ಕೆ.ಎಂ ಸಿಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.
Advertisement. Scroll to continue reading.