ಕಾರ್ಕಳ: ನಾಪತ್ತೆಯಾಗಿದ್ದ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಅವರ ಮೃತದೇಹ ಕಾರ್ಕಳ ಸಮೀಪದ ಪುಲ್ಕೇರಿ ಬಳಿ ಬಾವಿಯಲ್ಲಿ ಪತ್ತೆಯಾಗಿದೆ.
ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಅ.19ರಿಂದ ಕಾಣೆಯಾಗಿದ್ದರು. ಅಂದು ರಾತ್ರಿ 7.30ಕ್ಕೆ ಪತ್ನಿಗೆ ಫೋನ್ ಮಾಡಿ ನಾನು ನಂದಿಕೂರಿನಲ್ಲಿದ್ದು ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಅನಂತರ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.
ಈ ಬಗ್ಗೆ ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶೃತಿನ್ ಪತ್ನಿ ನಾಪತ್ತೆ ದೂರು ದಾಖಲಿಸಿದ್ದರು.
Advertisement. Scroll to continue reading.
2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಇವರು ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಕಾರ್ಯತತ್ಪರತೆಯಿಂದ ಜನಾನುರಾಗಿಯಾಗಿದ್ದರು. ಅ.18ರಂದು ವಾರದ ರಜೆ ಪಡೆದಿದ್ದ ಶೃತಿನ್ ಅ.19ರಂದು ಸಿಎಲ್ ಪಡೆದಿದ್ದರು. ಬಳಿಕ ಕಾಣೆಯಾಗಿದ್ದರು.
ನಾಪತ್ತೆ ಬಳಿಕ ಜಿಲ್ಲೆಯ ವಿವಿದೆಡೆಗಳಲ್ಲಿ ತಿರುಗಾಡುತ್ತಿದ್ದ ಅವರು ಮಣಿಪಾಲದ ಎಟಿಎಂ ಒಂದರಿಂದ ಹಣವನ್ನು ನಗದೀಕರಿಸಿದ್ದರು ಎನ್ನಲಾಗಿದೆ.
Advertisement. Scroll to continue reading.