ಕಾಸರಗೋಡು : ಪೆರಿಯದಲ್ಲಿರುವ ಕೇರಳ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ. ವೆಂಕಟೇಶ್ವರಲು ಇಂದು ಮುಂಜಾನೆ ಹೈದರಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಕರುಳು ಸಂಬಂಧಿರೋಗದಿಂದ ವೆಂಕಟೇಶ್ವರಲು ಬಳಲುತ್ತಿದ್ದರು. ಈ ಬಗ್ಗೆ ಅವರು ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಲು.
2020ರ ಆಗಸ್ಟ್ 14 ರಂದು ಪ್ರೊ. ವೆಂಕಟಟೇಶ್ವರಲು ಕೇರಳ ಕೇಂದ್ರ ವಿಶ್ವ ವಿದ್ಯಾನಿಲಯದ ಮೂರನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು. 25 ವರ್ಷ ಗಳಿಂದ ಹೈದರಬಾದ್ ನ ಉಸ್ಮಾನಿಯಾ ವಿಶ್ವ ವಿದ್ಯಾನಿಲಯದ ಕಾಮರ್ಸ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದರು.
Advertisement. Scroll to continue reading.