ಕರಾವಳಿ

ಕುಂದಾಪುರ : ಮಕ್ಕಳ ದಿನಾಚರಣೆ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ , ಶಿಕ್ಷಕರಿಗೆ ಸನ್ಮಾನ

0

ಕುಂದಾಪುರ : ಎಸ್‌ಕೆಪಿಎ ದ.ಕ,ಉಡುಪಿ ಜಿಲ್ಲೆ- ಕುಂದಾಪುರ, ಬೈಂದೂರು ವಲಯದ ವತಿಯಿಂದ ಬುಧವಾರ ಮಕ್ಕಳ ದಿನಾಚರಣೆ ಅಂಗವಾಗಿ ಶ್ರೀ.ಕೆ.ಎಸ್.ಎಸ್.ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ ಶಾಲಾ ಚಿತ್ರಕಲಾ ಶಿಕ್ಷಕರಾದ ರಾಜಶೇಖರ್ ಎಮ್.ತಾಳಿಕೋಟೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಕೆಪಿಎ ಕುಂದಾಪುರ, ಬೈಂದೂರು ವಲಯದ ಅಧ್ಯಕ್ಷ ದಿವಾಕರ ಶೆಟ್ಟಿ ಉಪ್ಪುಂದ ವಹಿಸಿದ್ದರು.

Advertisement. Scroll to continue reading.

ಈ ಸಂದರ್ಭದಲ್ಲಿ ಶ್ರೀ.ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯ ಹಿರಿಯ ಶಿಕ್ಷಕ ಡಾ.ಕಿಶೋರ್ ಶೆಟ್ಟಿ, ಎಸ್‌ಕೆ‌ಪಿಎ ಕುಂದಾಪುರ, ಬೈಂದೂರು ಇದರ ನಿಕಟಪೂರ್ವ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಎಸ್‌ಕೆ‌ಪಿಎ ಕುಂದಾಪುರ, ಬೈಂದೂರು ಇದರ ಉಪಾಧ್ಯಕ್ಷ ಚಂದ್ರಕಾಂತ್, ಎಸ್‌ಕೆ‌ಪಿಎ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ‌ಮಠ, ಕಾರ್ಯಕ್ರಮದ ಸಂಯೋಜಕರು ನಮ್ಮ ವಲಯದ ಸದಸ್ಯರುಗಳಾದ ರಘುರಾಮ್ ಸಿ.ಜೆ, ವಿಶ್ವನಾಥ್ ಸುಮುಖ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜೇತರ ಪಟ್ಟಿ :

1)ಅನುಶ್ರಿ
2)ತುಳಸಿ
3ಆರ್ಯ

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ದಿವಾಕರ್ ಶೆಟ್ಟಿ ಸ್ವಾಗತಿಸಿ, ಚಂದ್ರಕಾಂತ್ ವಂದಿಸಿದರು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com