ಮೈಸೂರು: ಮೈಸೂರಿನ ನಂಜನಗೂಡು ಮತ್ತು ಕಡಕೋಳ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ-ಮೈಸೂರು ಎಕ್ಸ್ಪ್ರೆಸ್ ರೈಲನ್ನು ಹಳಿತಪ್ಪಿಸಲು ವಿಫಲ ಯತ್ನ ನಡೆದಿದೆ. ಲೋಕೋಪೈಲಟ್ ಗಳು ತಡೆದಿದ್ದು, ಈ ಮೂಲಕ ದೊಡ್ಡ ದುರಂತವೊಂದು ತಪ್ಪಿದೆ.
ಈ ಸಂಬಂಧ ರೈಲ್ವೇ ಸಂರಕ್ಷಣಾ ಪಡೆ (ಆರ್ಪಿಎಫ್) ಮತ್ತು ಸರ್ಕಾರಿ ರೈಲ್ವೇ ಪೊಲೀಸರು (ಜಿಆರ್ಪಿ) ಒಡಿಶಾ ಮೂಲದ ಸೋಮಯ್ ಮರಾಂಡಿ, ಭಜಾನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬವರನ್ನು ಬಂಧಿಸಲಾಗಿದೆ.
ಹಳಿ ತಪ್ಪಿಸಲು ಯತ್ನಗಳು ನಡೆಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮೈಸೂರಿನ ಆರ್ಪಿಎಫ್ನ ಪೋಸ್ಟ್ ಕಮಾಂಡರ್ ಎಂಎನ್ಎ ಖಾನ್ ಮತ್ತು ಕೆವಿ ವೆಂಕಟೇಶ ಅವರು ಆರ್ಪಿಎಫ್ ಸಿಬ್ಬಂದಿ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ, ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿಅನುಮಾನಾಸ್ಪದ ರೀತಿಯಲ್ಲಿ ಓಡಾಡಿಕೊಂಡಿದ್ದ ಒಡಿಶಾ ಮೂಲದ ಸೋಮಯ್ ಮರಾಂಡಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.
Advertisement. Scroll to continue reading.
ವಿಚಾರಣೆ ವೇಳೆ ಆತ ಇನ್ನಿಬ್ಬರು ಸೇರಿ ರೈಲನ್ನು ಹಳಿತಪ್ಪಿಸಲು ನಡೆಸಲಾಗಿದ್ದ ಪ್ರಯತ್ನದ ಕುರಿತು ಬಾಯ್ಬಿಟ್ಟಿದ್ದಾನೆ.
ನಂಜನಗೂಡು ಮತ್ತು ಕಡಕೋಳದ ನಡುವಿನ ರೈಲ್ವೆ ಹಳಿಯ ಮೇಲೆ ರಾಡ್ ಹಾಗೂ ಮರದ ದಿಮ್ಮಿ ಇಟ್ಟು ಹಳಿ ತಪ್ಪಿಸಲು ಯತ್ನಿಸಿದ್ದರು. ಕಬ್ಬಿಣದ ರಾಡ್ ಹಾಗೂ ಮರದ ದಿಮ್ಮಿ ಇಟ್ಟಿದ್ದ ಅಕ್ಕಪಕ್ಕದಲ್ಲೇ ಈ ಆರೋಪಿಗಳು ಓಡಾಡುತ್ತಿದ್ದರು. ಇದರ ಪರಿಣಾಮ ರೈಲು ಸಂಚಾರದಲ್ಲಿ ಸುಮಾರು ಆರು ನಿಮಿಷಗಳ ಕಾಲ ವಿಳಂಬವಾಗಿತ್ತು.
Advertisement. Scroll to continue reading.