ಕ್ರೀಡೆ

ಭಾರತ – ಆಸೀಸ್ ‘ವಿಶ್ವ ಕದನ’ಕ್ಕೆ ಕೌಂಟ್‌ಡೌನ್ ಶುರು

3

ಅಹಮದಾಬಾದ್: ಕಳೆದ ಒಂದೂವರೆ ತಿಂಗಳಿನಿಂದ ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ‘ಐಸಿಸಿ ವಿಶ್ವಕಪ್’ ಕ್ರಿಕೆಟ್ ಟೂರ್ನಿ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಏಕದಿನ ವಿಶ್ವ ವಿಜೇತರನ್ನು ನಿರ್ಧರಿಸಲು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜು ಗೊಂಡಿದೆ. ಟೂರ್ನಿಯಲ್ಲಿ ಅಜೇಯವಾಗಿ ಉಳಿದಿರುವ ಭಾರತ, ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿವೆ. ಕೋಟ್ಯಂತರ ಅಭಿಮಾನಿಗಳ ಹಾರೈಕೆಯೊಂದಿಗೆ ಆಡಳಿರುವ ರೋಹಿತ್ ಬಳಗ ಮೂರನೇ ಟ್ರೋಫಿಯತ್ತ ಕಣ್ಣಿಟ್ಟಿದೆ.

ಭಾರತದ ವಿರಾಟ್ ಕೊಹ್ಲಿ ಮತ್ತು ಆರ್. ಅಶ್ವಿನ್ ಅವರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಅನುಭವ ಹೇಗಿರುತ್ತೆ ಎಂಬುದು ಗೊತ್ತಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಚೊಚ್ಚಲ ಟಿ-20 ವಿಶ್ವಕಪ್ ಗೆದ್ದ ಅನುಭವ ರೋಹಿತ್ ಶರ್ಮಾ ಅವರಿಗಿದೆ. ಆದರೆ ಭಾನುವಾರ ನಡೆಯಲಿರುವ ಫೈನಲ್ ಪಂದ್ಯ ಸಂಪೂರ್ಣ ಭಿನ್ನವಾಗಿರುತ್ತದೆ.

ಇದು ಕೇವಲ ಗೆಲ್ಲಬೇಕಾದ ಕ್ರಿಕೆಟ್ ಪಂದ್ಯಾವಳಿಯಾಗಿರುವುದಿಲ್ಲ. ಬದಲಿಗೆ ಕೋಟ್ಯಂತರ ಭಾವನೆಗಳಿಗೆ ಸ್ಪಂದಿಸಬೇಕಾದ ಮಹತ್ವದ ಪಂದ್ಯವಾಗಿದೆ. ಹೊರಗಿನ ಪ್ರತಿಕ್ರಿಯೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರೋಹಿತ್ ಹಾಗೂ ಟೀಂ ಇಂಡಿಯಾ ಆಟಗಾರರು ಹೇಳಿದ್ದಾರೆ.

Advertisement. Scroll to continue reading.

ಉತ್ತಮ‌ ಲಯದಲ್ಲಿ ಭಾರತ

ಭಾರತದ ಪರ ಆರಂಭಿಕ ಆಟಗಾರರ ಕಣಕ್ಕಿಳಿಯುವ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ ಮನ್ ಗಿಲ್ ಉತ್ತಮ ಅಡಿಪಾಯ ಹಾಕುವುದರೊಂದಿಗೆ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ನಂತರ ಬರುವ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಸಾಧನೆ ಇಡೀ ಜಗತ್ತಿಗೆ ಗೊತ್ತಿದೆ. ಇನ್ನೂ ಶ್ರೇಯಸ್ ಅಯ್ಯರ್ ಕಿವೀಸ್ ವಿರುದ್ಧದ ಸೆಮಿಫೈನಲ್ ನಲ್ಲಿ ಸಿಡಿಸಿದ ಶತಕದೊಂದಿಗೆ ತಂಡದ ವಿಶ್ವಾಸವನ್ನು ಹೆಚ್ಚಿಸಿದ್ದಾರೆ.

ಇನ್ನೂ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಅತಿ ಹೆಚ್ಚು ವಿಕೆಟ್ ಕಬಳಿಸುವ ಮೂಲಕ ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಸಿರಾಜ್, ಬೂಮ್ರಾ ಕೂಡಾ ಉತ್ತಮ ಫಾರ್ಮ್ ನಲ್ಲಿದ್ದಾರೆ. ವಿಕೆಟ್ ಕೀಪಿಂಗ್ ನಲ್ಲಿ ಕೆಎಲ್ ರಾಹುಲ್ ಅಬ್ಬರದ ಸಾಧನೆಯಿಲ್ಲದಿದ್ದರೂ ಉಪಯುಕ್ತ ಕಾಣಿಕೆ ನೀಡುತ್ತಿದ್ದಾರೆ. ಇನ್ನೂ ರವೀಂದ್ರ ಜಡೇಜಾ, ಸೂರ್ಯ ಕುಮಾರ್ ಯಾದವ್, ಕುಲದೀಪ್ ಯಾದವ್ ಎಲ್ಲರೂ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಭಾರತ ಈ ಬಾರಿ ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಇನ್ನೂ ವರ್ಷದ ಆರಂಭದಲ್ಲಿಯೇ ಭಾರತದಲ್ಲಿಯೇ ಏಕದಿನ ಸರಣಿ ಗೆದ್ದಿರುವ ಆಸ್ಟ್ರೇಲಿಯಾ ಕೂಡಾ, ವಿಶ್ವಕಪ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 1,30,000 ಅಭಿಮಾನಿಗಳ ಸಮ್ಮುಖದಲ್ಲಿ ನಡೆಯುವ ಪಂದ್ಯ ಹೇಗಿರಲಿದೆ ಎಂಬುದು ಆಸ್ಟ್ರೇಲಿಯಾ ನಾಯಕ ಕಮ್ಮಿನ್ಸ್ ಗೆ ತಿಳಿದಿದ್ದು, ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಮೊಹಮ್ಮದ್ ಶಮಿ ವೇಗಿಯ ಹೆದರಿಕೆ ಇದ್ದರೂ, ಈ ಟೂರ್ನಿಯಲ್ಲಿ ಯಶಸ್ಸು ಗಳಿಸುವುದಾಗಿ ಹೇಳಿದ್ದಾರೆ.

Advertisement. Scroll to continue reading.

ತಂಡಗಳು ಇಂತಿದೆ:

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ , ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್ ಮತ್ತು ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್, ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್, ಜೋಶ್ ಇಂಗ್ಲಿಸ್ (wk), ಅಲೆಕ್ಸ್ ಕ್ಯಾರಿ (wk), ಸೀನ್ ಅಬಾಟ್.

ಪಂದ್ಯದ ಕಾಲಮಾನ: ಮಧ್ಯಾಹ್ನ 2 ಗಂಟೆಗೆ ಆರಂಭ

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com