ಬೈಂದೂರು : ಸ್ಕೂಟಿಗಳ ನಡುವೆ ಡಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿರುವ ಘಟನರ ನಾವುಂದ ಗ್ರಾಮದಲ್ಲಿ ನಡೆದಿದೆ.
ಕೆ. ಹಮ್ಮದ್ ಮೃತ ಸವಾರ. ಇನ್ನೋರ್ವ ಸವಾರ ನಾಗರಾಜ ಗಾಯಗೊಂಡಿದ್ದಾರೆ.
ನಾಗರಾಜ ಅವರು ಮಂಗಳವಾರ ಬೆಳಿಗ್ಗೆ ಸ್ಕೂಟಿಯಲ್ಲಿ ರಾಹೆ 66 ರ ಪಶ್ಚಿಮ ಬದಿಯ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದಾಗ, ನಾವುಂದ ಗ್ರಾಮದ ಮಸ್ಕಿ ಮಹಾಗಣಪತಿ ದೇವಸ್ಥಾನದ ಬಳಿ ತಲುಪಿದಾಗ ಪಶ್ಚಿಮ ಬದಿಯ ರಸ್ತೆಯಲ್ಲಿ ವಿರುದ್ದ ದಿಕ್ಕಿನಿಂದ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಕೆ.ಹಮ್ಮದ್ ಅವರ ಟಿವಿಎಸ್ ಜುಪಿಟರ್ ಸ್ಕೂಟಿ ಡಿಕ್ಕಿ ಹೊಡೆದಿದೆ.
Advertisement. Scroll to continue reading.
ಪರಿಣಾಮ ಎರಡೂ ವಾಹನ ಸವಾರರು ವಾಹನ ಸಮೇತ ರಸ್ತೆಗೆ ಬಿದ್ದಿದ್ದಾರೆ. ಗಾಯಗೊಂಡ ನಾಗರಾಜ ದೇವಾಡಿಗ ರವರಿಗೆ ಕುಂದಾಪುರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಹಮ್ಮದ್ ರವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಕೆ ಹಮ್ಮದ್ ಎಂಬವರು ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.