ಇಸ್ಲಾಮಾಬಾದ್: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರರು ಪಾಕಿಸ್ತಾನದಲ್ಲಿ ಗುಂಡೇಟಿಗೆ ಬಲಿಯಾಗುತ್ತಿರೋದು ಹಳೇ ಸುದ್ದಿ. ಆದರೆ ಈಗ ಪಾಕಿಸ್ತಾನದ ಜೈಲಿನಲ್ಲಿಯೇ ಉಗ್ರನೊಬ್ಬನಿಗೆ ವಿಷ ಪ್ರಾಶನ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಮುಂಬೈ ದಾಳಿಯ ಪ್ರಮುಖ ಸಂಚುಕೋರ, ಲಷ್ಕರ್ ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಸದಸ್ಯ ಸಾಜಿದ್ ಮಿರ್ ವಿಷ ಆಹಾರ ಸೇವಿಸಿದ್ದಾನೆ. ಸದ್ಯ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ
ಕೆಲವು ತಿಂಗಳ ಹಿಂದೆ ಸಾಜಿದ್ ಮಿರ್ನನ್ನು ಲಾಹೋರ್ ಜೈಲಿನಿಂದ ಡೇರಾ ಘಾಜಿ ಖಾನ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. ಈಗ ವಿಷ ಆಹಾರ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿರುವ ಸಾಜಿದ್ ಮಿರ್ನನ್ನು ಪಾಕಿಸ್ತಾನ ಸೇನೆ ಏರ್ಲಿಫ್ಟ್ ಮಾಡಿ ಬಹವಾಲ್ಪುರದ ಸಿಎಂಎಚ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ದಾಖಲಿಸಲಾಗಿದೆ.
Advertisement. Scroll to continue reading.
ವಿಷ ಪ್ರಾಶನ ಪ್ರಕರಣ ವರದಿಯಾದ ಬೆನ್ನಲ್ಲೇ ಜೈಲಿನಲ್ಲಿದ್ದ ಅಡುಗೆ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾನೆ.
ಲಷ್ಕರ್ ಎ ತೈಬಾದ ಹಿರಿಯ ಸದಸ್ಯ:
ಸಾಜಿದ್ ಮಿರ್ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್ಇಟಿ) ಹಿರಿಯ ಸದಸ್ಯನಾಗಿದ್ದು 2008ರ ನವೆಂಬರ್ನಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಪಟ್ಟಂತೆ ಭಾರತಕ್ಕೆ ಬೇಕಾಗಿದ್ದಾನೆ.
ಮುಂಬೈ ಭಯೋತ್ಪಾದಕ ದಾಳಿಯಲ್ಲಿನ ಪಾತ್ರಕ್ಕಾಗಿ ಅಮೆರಿಕ ಆತನ ತಲೆಗೆ 5 ದಶಲಕ್ಷ ಡಾಲರ್ ಬಹುಮಾನ ಘೋಷಿಸಿದೆ. 2022ರ ಜೂನ್ನಲ್ಲಿ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಭಯೋತ್ಪಾದನೆ – ಹಣಕಾಸಿನ ಪ್ರಕರಣದಲ್ಲಿ ಮೀರ್ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
Advertisement. Scroll to continue reading.