ಕರಾವಳಿ

ಹಿರಿಯಡ್ಕ : ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶ

0

ಹಿರಿಯಡ್ಕ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ನ್ನು ಹಾಗೂ ಮರಳನ್ನು ವಶಕ್ಕೆ ಪಡೆದಿರುವ ಘಟನೆ ಹಿರಿಯಡಕದಲ್ಲಿ ನಡೆದಿದೆ.

ಗುರುವಾರ ಬೆಳಿಗ್ಗೆ ಪಿ.ಎಸ್.ಐ ಮಂಜುನಾಥ್ ಮರಬದರವರು ಠಾಣಾ ಸಿಬ್ಬಂದಿಗಳೊಂದಿಗೆ ಹಿರಿಯಡಕ ಪೊಲೀಸ್ ಠಾಣಾ ಮುಂಭಾಗದಲ್ಲಿ ರಾ.ಹೆ 169 (ಎ) ರಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಹಿರಿಯಡಕ ಜಂಕ್ಷನ್‌ನಿಂದ ಮಣಿಪಾಲ ಕಡೆಗೆ ಬರುತ್ತಿದ್ದ ಹಳದಿ ಬಣ್ಣದ ಟಿಪ್ಪರ್‌ ವಾಹನದ ಚಾಲಕ ಪಿ.ಎಸ್.ಐ ಮತ್ತು ಸಿಬ್ಬಂದಿಗಳನ್ನು ನೋಡಿ ಟಿಪ್ಪರ್‌ನ್ನು ಸ್ವಲ್ಪ ದೂರದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಕೀಯನ್ನು ವಾಹನದಲ್ಲೇ ಬಿಟ್ಟು ವಾಹನದಿಂದ ಇಳಿದು ಸ್ಥಳದಿಂದ ಪರಾರಿಯಾಗಿದ್ದಾನೆ.

Advertisement. Scroll to continue reading.

ಟಿಪ್ಪರ್‌ ವಾಹನವನ್ನು ಪರಿಶೀಲಿಸಿದಾಗ ಅದರಲ್ಲಿ ಮರಳು ತುಂಬಿರುವುದು ಕಂಡು ಬಂದಿದೆ. ವಾಹನದಲ್ಲಿನ ಮರಳಿನ ಅಂದಾಜು ಮೌಲ್ಯ 12 ಸಾವಿರ ರೂಪಾಯಿ ಆಗಿದ್ದು, ಮರಳು ಹಾಗೂ ಮರಳು ತುಂಬಿದ ಟಿಪ್ಪರ್‌ ವಾಹನವನ್ನು ಪಂಚರ ಸಮಕ್ಷಮ ಮಹಜರು ಮುಖೇನಾ  ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ  ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com