ಉಡುಪಿ : ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬAಧಪಟ್ಟAತೆ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ೧೧ ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನವೆಂಬರ್ ೧೨ ರಂದು ಉಡುಪಿ ನಗರ ಸಮೀಪದ ನೆಜ್ಜಾರುವಿನಲ್ಲಿ ಹಸೀನಾ (೪೬), ಅಫ್ನಾನ್ (೨೩), ಐನಾಜ್ (೨೧) ಮತ್ತು ಅಸೀಮ್ (೧೨) ರನ್ನು ಆರೋಪಿ ೩೭ ವರ್ಷದ ಪ್ರವೀಣ್ ಅರುಣ್ ಚೌಗಲೆ ಹತ್ಯೆ ಮಾಡಿದ್ದ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಯೋಗಿಯಾಗಿರುವ ಆರೋಪಿ, ಸ್ನೇಹ, ಐನಾಜ್ ಮೇಲಿನ ಪ್ರೀತಿ ಮತ್ತು ಹಣಕಾಸಿನ ವಿಷಯಗಳಿಗೆ ಸಂಬAಧಿಸಿದ ವಿಚಾರಗಳು ಈ ಘೋರ ಕೃತ್ಯ ಮಾಡಲು ಪ್ರೇರೇಪಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.
ಆರೋಪಿಯನ್ನು ಪತ್ತೆಹಚ್ಚಿದ ನಂತರ ಪೊಲೀಸರು ನವೆಂಬರ್ ೧೬ ರಂದು ಸಂತ್ರಸ್ತರ ನಿವಾಸಕ್ಕೆ ಕರೆತಂದಿದ್ದರು. ಈ ವೇಳೆ ಆಕ್ರೋಶಗೊಂಡ ಸ್ಥಳೀಯರು ಆತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.
Advertisement. Scroll to continue reading.
ಪೊಲೀಸರು ಬಹಳ ಕಷ್ಟಪಟ್ಟು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು ಮತ್ತು ಉದ್ರಿಕ್ತ ಗುಂಪನ್ನು ಹತ್ತಿಕ್ಕಲು ಲಾಠಿ ಚಾರ್ಜ್ ಮಾಡಬೇಕಾಯಿತು.
ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದ ೧೧ ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Advertisement. Scroll to continue reading.