ರಾಜ್ಯ

ಯುವತಿಯಂತೆ ನಟಿಸಿ ವಿದ್ಯಾರ್ಥಿಯಿಂದ ಹಣ ಪಡೆದು ವಂಚನೆ; ಯುವಕನ ಬಂಧನ

1

ತುಮಕೂರು: ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87  ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು  ಬಂಧಿಸಿದ್ದಾರೆ.

ಸುಜೇಂದ್ರ (21) ಎಂಬಾತ ಬಂಧಿತ ಆರೋಪಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆರೋಪಿಗಳು ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದರು. ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದರು.

ಭರತ್ ಕುಮಾರ್‌ರನ್ನು ಫೇಸ್ ಬುಕ್‌ ಮೂಲಕ ಪರಿಚಯ ಮಾಡಿಕೊಂಡ ಆರೋಪಿಗಳು ಶರ್ಮಿಳಾ ಮತ್ತು ದಿವ್ಯ ಎಂಬ ಹೆಸರಿನಲ್ಲಿ ಮೆಸೆಂಜರ್ ಹಾಗೂ ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದಾರೆ. ಬಳಿಕ ಕಷ್ಟ ಇದೆ ಎಂದು ನಂಬಿಸಿ ಹಣವನ್ನು ಫೋನ್ ಪೇ, ಪೇಟಿಎಂ, ಗೂಗಲ್ ಪೇ ಹಾಗೂ ಉಳಿತಾಯ ಖಾತೆಗಳಿಗೆ 7.25 ಲಕ್ಷ ರೂ ಹಾಕಿಸಿಕೊಂಡು ವಂಚಿಸಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಸಂತ್ರಸ್ತ ವಿದ್ಯಾರ್ಥಿಯಾಗಿದ್ದು,  ಹಣ ಕಳೆದುಕೊಂಡ ಉದ್ಯಮಿ ಆತನ ತಂದೆ ಶಾಂತಕುಮಾರ್ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 12 ರಂದು ಶಿವಮೊಗ್ಗ ನಗರ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಟೌನ್ ನಿವಾಸಿ ಸುಜೇಂದ್ರ ಎಂ.ಬಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇತರೆ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿದಿದೆ.

ವಿಚಾರಣೆ ವೇಳೆ ಆರೋಪಿ ತಾನು ಆನ್‌ಲೈನ್ ಜೂಜಾಟದ ಚಟ ಹೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸಂತ್ರಸ್ತನಿಂದ ಪಡೆದಿದ್ದ ಹಣವನ್ನು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಸಿಇಎನ್ ಇನ್ಸ್‌ಪೆಕ್ಟರ್ ರಾಮಕೃಷ್ಣಯ್ಯ ನೇತೃತ್ವದ ತಂಡ ತನಿಖೆ ಕೈಗೊಂಡಿದೆ.

    Click to comment

    You May Also Like

    Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com