ಕರಾವಳಿ

ದೇಶವನ್ನು ಹಿಂದೂ ರಾಷ್ಟ್ರವೆನ್ನುವುದು ತಪ್ಪೆಂದರೆ, ರಾಜ್ಯವನ್ನು ಕರ್ನಾಟಕವೆಂದು ಕರೆಯುವುದು ತಪ್ಪಾಗುತ್ತದೆ: ಪೇಜಾವರ ಶ್ರೀ

1

ಉಡುಪಿ‌‌ : ಶ್ರೀರಾಮಮಂದಿರ ಉಳಿಯಬೇಕಾದರೆ ಭಾರತ ಹಿಂದೂ ರಾಷ್ಟ್ರ ಆಗಬೇಕು ಎಂದು ಹೇಳಿದ್ದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕನ್ನಡಿಗರೇ ಬಹುಸಂಖ್ಯಾತರಿರುವ ರಾಜ್ಯವನ್ನು ಕರ್ನಾಟಕ ಎಂದು ಕರೆಯಬಹುದಾದರೆ, ಹಿಂದೂಗಳು ಬಹುಸಂಖ್ಯಾತರಿರುವ ಭಾರತವನ್ನು ಹಿಂದೂ ರಾಷ್ಟ್ರ  ಎಂದು ಯಾಕೆ ಕರೆಯಬಾರದು ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕ ಕನ್ನಡ ಭಾಷಿಗರು ಬಹುಸಂಖ್ಯಾತರಾಗಿರುವ ರಾಜ್ಯ. ಕನ್ನಡ ಭಾಷೆ ಹುಟ್ಟಿ ಬೆಳೆದ ನೆಲ. ಇಲ್ಲಿ ಕನ್ನಡಿಗರು ಮಾತ್ರ ಅಲ್ಲ, ಎಲ್ಲಾ ಭಾಷಿಗರು ಇದ್ದಾರೆ ಎಂದ ಮಾತ್ರಕ್ಕೆ ಇದನ್ನು ಕರ್ನಾಟಕ ರಾಜ್ಯ ಹೇಳಬೇಕಾ ಅಥವಾ ಬೇಡವಾ? ಕನ್ನಡ ಭಾಷೆ ಹುಟ್ಟಿದ ನೆಲೆ ಎಂದ ಮಾತ್ರಕ್ಕೆ ಇದನ್ನು ಮೈಸೂರು ರಾಜ್ಯ ಇದ್ದದ್ದನ್ನು ತೆಗೆದು ಕರ್ನಾಟಕ ರಾಜ್ಯ ಕರೆಯಲಾಗಿತ್ತು ಎಂದರು.

Advertisement. Scroll to continue reading.

ಮುಸ್ಲಿಮರಿಗೆ ಮೆಕ್ಕ, ಕ್ರಿಶ್ಚಿಯನ್ನರಿಗೆ ಜೆರುಸುಲೆಂ ಇರುವಂತೆ, ಹಿಂದೂಗಳು ನಿತ್ಯಪಠಿಸುವ ಮೋಕ್ಷದಾಯಕ ಕ್ಷೇತ್ರಗಳು ವಿಮೋಚನೆಗೊಳ್ಳಬೇಕು. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಧಾರ್ಮಿಕ ಕ್ಷೇತ್ರಗಳು ಕೂಡ ವಿಮೋಚನೆಗೊಳ್ಳಬೇಕಿತ್ತು. ಆದರೆ, ನಮ್ಮ ಧಾರ್ಮಿಕ ಕ್ಷೇತ್ರಗಳು ಹಾಗೆಯೇ ಬಾಕಿ ಉಳಿದಿವೆ. ಸ್ವಾತಂತ್ರ್ಯ ದೊರಕಿ 75 ವರ್ಷದ ಮೇಲಾದರೂ ವಿಮೋಚನೆಗೊಳ್ಳಲಿ ಎಂದರು.

ನಮ್ಮ ಶ್ರದ್ಧಾ ಕೇಂದ್ರ ಮತ್ತೆ ನಮಗೆ ಮರಳಿ ಸಿಗಬೇಕು. ಅಯೋಧ್ಯೆಗೆ ವಿಚಾರದಲ್ಲಿ ಬಂದಿರುವ ತೀರ್ಪಿನಂತೆ ಕಾಶಿ ಮಥುರ ವಿಚಾರದಲ್ಲೂ ನ್ಯಾಯಾಲಯ ಅನುವು ಮಾಡಿಕೊಟ್ಟಿದೆ. ನ್ಯಾಯಾಲಯದ ಈ ನಡೆಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ. ಗುರಿ ಮುಟ್ಟುವ ತನಕ ಈ ಕೆಲಸ ನಿಲ್ಲದಿರಲಿ. ನಾವ್ಯಾರು ಬಲತ್ಕಾರವಾಗಿ ಕ್ಷೇತ್ರವನ್ನು ತೆಗೆದುಕೊಳ್ಳುತ್ತಿಲ್ಲ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನಬದ್ಧವಾಗಿ ನಡೆದುಕೊಂಡಿದ್ದೇವೆ. ಎಲ್ಲರೂ ಇದನ್ನು ಬೆಂಬಲಿಸಬೇಕೆ ಹೊರತು ವಿರೋಧಿಸಬಾರದು ಎಂದರು.

ರಾಮಮಂದಿರ ನಿರ್ಮಾಣದಲ್ಲಿ ಕರ್ನಾಟಕದ ಪಾತ್ರ ವಿಚಾರವಾಗಿ ಮಾತನಾಡಿದ ಪೇಜಾವರ ಶ್ರೀ, ಕರ್ನಾಟಕ ರಾಜ್ಯದಿಂದಲೂ ಅನೇಕ ಸೇವೆಗಳು ಸಲ್ಲುತ್ತಿವೆ. ಮಂದಿರದ ವೇದಿಕೆ ನಿರ್ಮಾಣಕ್ಕೆ ಕರ್ನಾಟಕದ ಕಲ್ಲುಗಳು ಬಳಕೆಯಾಗಿವೆ. ಅನೇಕ ಇಂಜಿನಿಯರ್‌ಗಳು ಸಹಾಯಕರು ಕರ್ನಾಟಕದವರು ಇದ್ದಾರೆ. ಕರ್ನಾಟಕದವರು ಬೃಹತ್ ಗಾತ್ರದ ಗಂಟೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com