ನವದೆಹಲಿ: ಸಂಸತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವನ ಬಂಧನವಾಗಿದೆ.
ಜಲೌನ್ನ ನಿವಾಸಿ ಅತುಲ್ ಕುಲಶ್ರೇಷ್ಠ ಅಲಿಯಾಸ್ ಬಚಾ ಎಂಬಾತನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಓರೈ ತಲುಪಿದ ದೆಹಲಿಯ ವಿಶೇಷ ಸೆಲ್ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದ್ದಾರೆ.
ಜಲೌನ್ನಲ್ಲಿ ದೆಹಲಿ ಪೊಲೀಸರು ಬಂಧಿಸಿರುವ ಅತುಲ್ ಕುಲಶ್ರೇಷ್ಠ ಬಚ್ಚಾ ಸಂಸತ್ತಿಗೆ ನುಗ್ಗಿದ ಆರೋಪಿಗಳೊಂದಿಗೆ ಫೇಸ್ಬುಕ್ನಲ್ಲಿ ಚಾಟ್ ಮಾಡಿದ ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ನೊಂದಿಗೆ ಸಂಬಂಧ ಹೊಂದಿದ್ದ. ಅತುಲ್ ಕುಲಶ್ರೇಷ್ಠ ತನ್ನ ವಿದ್ಯಾರ್ಥಿ ಜೀವನದಿಂದಲೂ ಶಹೀದ್ ಆಜಮ್ ಸರ್ದಾರ್ ಭಗತ್ ಸಿಂಗ್ ಅವರ ಸಿದ್ಧಾಂತದೊಂದಿಗೆ ಸಂಬಂಧ ಹೊಂದಿದ್ದಾನೆ. ಆತ ಅನೇಕ ಬಾರಿ ಸೆಮಿನಾರ್ಗಳು ಮತ್ತು ಸಭೆಗಳಲ್ಲಿ ಭಾಗವಹಿಸಿದ್ದನು. ಆದರೆ ಆತ ಯಾವುದೇ ಕ್ರಿಮಿನಲ್ ದಾಖಲೆಯನ್ನು ಹೊಂದಿಲ್ಲ. ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ.
Advertisement. Scroll to continue reading.
ಸಂಸತ್ತಿಗೆ ನುಗ್ಗಿದ ಆರೋಪಿಗಳೊಂದಿಗೆ ಚಾಟ್ ಮಾಡಿದ್ದರಿಂದ ದೆಹಲಿ ಪೊಲೀಸರು ಅತುಲ್ ನನ್ನು ವಶಕ್ಕೆ ಪಡೆದಿದ್ದಾರೆ.
ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
Advertisement. Scroll to continue reading.