ರಾಜ್ಯ

ಮಗು ಹತ್ಯೆ ಪ್ರಕರಣ: ಸುಚನಾ ಸೇಠ್‌ಗೆ ಮಾನಸಿಕ ಪರೀಕ್ಷೆ; ವಿಚ್ಛೇದಿತ ಪತಿಯಿಂದ ತಿಂಗಳಿಗೆ 2.5 ಲಕ್ಷ ಪರಿಹಾರ ಕೇಳಿದ್ದ ಮಹಿಳೆ

1

ಬೆಂಗಳೂರು : ತನ್ನ ಮಗುವನ್ನು ಹತ್ಯೆ ಮಾಡಿದ ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪೆನಿ ಸಿಇಒ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸುತ್ತಿರುವ ಗೋವಾ ಪೊಲೀಸರಿಗೆ ಹಲವು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗೋವಾದ ಅಪಾರ್ಟ್‌ಮೆಂಟ್‌ನಲ್ಲಿ ಕೆಮ್ಮಿನ ಸಿರಪ್‌ನ ಎರಡು ಖಾಲಿ ಬಾಟಲಿಗಳು ಪತ್ತೆಯಾಗಿವೆ. ಮಗುವನ್ನು ಹತ್ಯೆ ಮಾಡಲು ಮೊದಲೇ ಸುಚನಾ ಸೇಠ್ ಯೋಜನೆ ರೂಪಿಸಿಕೊಂಡಿದ್ದು, ಮಗುವಿಗೆ ಔಷಧಿಯ ಹೆಚ್ಚಿನ ಡೋಸ್ ನೀಡಿರಬಹುದು ಎಂದು ಹೇಳಲಾಗುತ್ತಿದೆ.

ಆಕೆಯ ಮಾನಸಿಕ ಸ್ಥಿತಿಯನ್ನು ನಿರ್ಣಯಿಸಲು ಮತ್ತು ಘೋರ ಅಪರಾಧದ ಉದ್ದೇಶವನ್ನು ಕಂಡುಹಿಡಿಯಲು ಸಹಾಯ ಮಾಡಲು ಸುಚನಾಳನ್ನು ಮಾನಸಿಕ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

Advertisement. Scroll to continue reading.

ನಾಲ್ಕು ವರ್ಷದ ಮಗುವನ್ನು ಬಟ್ಟೆಯಿಂದ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಮಹಿಳೆ ಸುಚನಾ ಸೇಠ್ ಸೋಮವಾರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ಮಗನನ್ನು ಕೊಂದು ಶವವನ್ನು ಬ್ಯಾಗ್‌ನಲ್ಲಿ ತುಂಬಿ ಟ್ಯಾಕ್ಸಿಯಲ್ಲಿ ಬೆಂಗಳೂರಿಗೆ ಕೊಂಡೊಯ್ಯುವ ಉದ್ದೇಶ ಹೊಂದಿದ್ದಳು. ಸೋಮವಾರ ರಾತ್ರಿ ಚಿತ್ರದುರ್ಗದಿಂದ ಆಕೆಯನ್ನು ಬಂಧಿಸಿ ಮಂಗಳವಾರ ಗೋವಾಕ್ಕೆ ಕರೆತರಲಾಗಿತ್ತು.

ಪೊಲೀಸ್ ಮೂಲಗಳ ಪ್ರಕಾರ, ಸುಚನಾ ಸೇಠ್ ವಿಚಾರಣೆಯ ಸಮಯದಲ್ಲಿ ತಾನು ಅಪರಾಧದಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದು, ಮಗು ನಿದ್ರೆಯಿಂದ ಎದ್ದಾಗ ಸಹಜವಾಗಿಯೇ ಸತ್ತುಹೋಗಿತ್ತು ಎಂದು ಹೇಳಿದ್ದಾಳೆ ಎನ್ನಲಾಗಿದೆ.

ಪತಿಯಿಂದ 2.5 ಲಕ್ಷ ಬೇಡಿಕೆ :

Advertisement. Scroll to continue reading.

ಪತಿ ವೆಂಕಟರಮಣ ಜೊತೆ ವಿಚ್ಛೇದನ ಪ್ರಕ್ರಿಯೆ ಹಂತದಲ್ಲಿರುವ ಸುಚನಾ ಸೇಠ್, ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪ ದಾಖಲಿಸಿದ್ದಲ್ಲದೆ ಪತಿ ತನಗೆ 2.5 ಲಕ್ಷ ರೂಪಾಯಿಗಳನ್ನು ಪ್ರತಿ ತಿಂಗಳು ಜೀವನ ನಡೆಸಲು ನಿರ್ವಹಣೆ ವೆಚ್ಚವಾಗಿ ನೀಡಬೇಕೆಂದು ಕೋರಿದ್ದಾಳೆ.

ಮಗುವನ್ನು ಕೊಂದ ನಂತರ ಇದು ಬೆಳಕಿಗೆ ಬಂದಿದ್ದು, ಸುಚನಾ ಸೇಠ್ ತನ್ನ ವಿಚ್ಛೇದಿತ ಪತಿ ವಿರುದ್ಧ ಸಲ್ಲಿಸಿದ ಕೌಟುಂಬಿಕ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ನ್ಯಾಯಾಲಯದ ದಾಖಲೆಗಳಲ್ಲಿ, ತನ್ನ ಪತಿ ತಿಂಗಳಿಗೆ 9 ಲಕ್ಷ ರೂಪಾಯಿಗಳ ಆದಾಯದಂತೆ ವರ್ಷಕ್ಕೆ ಸುಮಾರು 1ಕೋಟಿ ರೂಪಾಯಿ ಆದಾಯ ಹೊಂದಿದ್ದು, ಇದರಿಂದ ತನಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ನೀಡಬೇಕೆಂದು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾಳೆ.

ಸುಚನಾ ಸೇಠ್ ಮಾರ್ಚ್ 2021 ರಿಂದ ಕೌಟುಂಬಿಕ ದೌರ್ಜನ್ಯವನ್ನು ಉಲ್ಲೇಖಿಸಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ತನ್ನ ಮತ್ತು ಪತಿಯ ವಾಟ್ಸಾಪ್ ಸಂದೇಶಗಳು, ಚಿತ್ರಗಳು ಮತ್ತು ವೈದ್ಯಕೀಯ ದಾಖಲೆಗಳ ಪ್ರತಿಗಳನ್ನು ನ್ಯಾಯಾಲಯಕ್ಕೆ ಒದಗಿಸಿದ್ದಳು. 
ದಂಪತಿ ನವೆಂಬರ್ 18, 2010 ರಂದು ಕೋಲ್ಕತ್ತಾದಲ್ಲಿ ವಿವಾಹವಾಗಿದ್ದರು. ಆಗಸ್ಟ್ 14, 2019 ರಂದು ದಂಪತಿಗೆ ಗಂಡು ಮಗು ಜನಿಸಿತ್ತು. ಸುಚನಾ ಪತಿ ವೆಂಕಟರಮಣ ವಿರುದ್ಧ  ಆಗಸ್ಟ್ 2022ರಲ್ಲಿ ಕೌಟುಂಬಿಕ ದೌರ್ಜನ್ಯದಡಿ ಪ್ರಕರಣ ದಾಖಲಿಸಿದ್ದಳು ಎನ್ನಲಾಗಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com